
ಪ್ರಜಾವಾಣಿ ವಾರ್ತೆ
ಕೊಟ್ಟೂರು: ತಾಲ್ಲೂಕಿನ ಬೆನಕನಹಳ್ಳಿ ಬಳಿ ಎತ್ತಿನ ಬಂಡಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.
ನಿವೇದಿತಾ(23), ಶಿವಕುಮಾರ್(34) ಮೃತರು. ನಿವೇದಿತಾ ತಮ್ಮ ತವರೂರು ಜಗಳೂರು ತಾಲ್ಲೂಕಿನ ಹೊಸಕೆರೆಯಿಂದ ಶಿವಕುಮಾರ್ ಅವರ ಸಂಡೂರಿಗೆ ಹೊರಟಿದ್ದರು. ಹೊಸಕೆರೆಯಿಂದ- ಸಂಡೂರಿಗೆ ಹೋಗುವ ಮಾರ್ಗ ಮಧ್ಯೆ ಅಪಘಾತವಾಗಿದೆ.
ಬೈಕ್ ಎತ್ತಿನಗಾಡಿಗೆ ಡಿಕ್ಕಿ ಹೊಡೆದ ರಭಸಕ್ಕೆ ಗಾಡಿಯ ಮುಂಭಾಗದ ಕಬ್ಬಿಣದ ಸಲಾಕೆ(ಮೋಕು) ಇಬ್ಬರ ಎದೆಗೂ ಹೊಕ್ಕಿ, ತೀವ್ರಗಾಯಗಳಾದ ಪರಿಣಾಮ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.
ಎತ್ತಿನಗಾಡಿ ಸಾವರನಿಗೂ ಗಾಯಗಳಾಗಿವೆ ಎಂದು ಪಿಎಸ್ಐ ಎಚ್. ನಾಗಪ್ಪ ತಿಳಿಸಿದರು. ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.