ADVERTISEMENT

ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪ್ರಚಾರ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 17:04 IST
Last Updated 30 ಏಪ್ರಿಲ್ 2019, 17:04 IST
ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪನವರು ಗುರುವಾರ ಹೊಸಪೇಟೆಯ ಮೇನ್‌ ಬಜಾರ್‌ನಲ್ಲಿ ಪ್ರಚಾರ ಕೈಗೊಂಡರು–ಪ್ರಜಾವಾಣಿ ಚಿತ್ರ
ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪನವರು ಗುರುವಾರ ಹೊಸಪೇಟೆಯ ಮೇನ್‌ ಬಜಾರ್‌ನಲ್ಲಿ ಪ್ರಚಾರ ಕೈಗೊಂಡರು–ಪ್ರಜಾವಾಣಿ ಚಿತ್ರ   

ಹೊಸಪೇಟೆ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪನವರು ಗುರುವಾರ ನಗರದ ಮೇಜಾರ್‌ನಲ್ಲಿ ಪ್ರಚಾರ ಕೈಗೊಂಡರು.

ವಡಕರಾಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೇನ್‌ ಬಜಾರ್‌ನ ಪ್ರಮುಖ ರಸ್ತೆಗಳಲ್ಲಿ ತೆರೆದ ವಾಹನದಲ್ಲಿ ಮತಯಾಚಿಸಿದರು.

‘ಐದು ವರ್ಷಗಳಲ್ಲಿ ಮೋದಿಯವರು ಉತ್ತಮ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಅವರು ಪ್ರಧಾನಿಯಾಗುವುದು ಖಚಿತ. ಜಿಲ್ಲೆಯ ಜನ ನನ್ನನ್ನು ಗೆಲ್ಲಿಸಿ, ಮೋದಿಯವರ ಕೈ ಬಲಪಡಿಸಬೇಕು’ ಎಂದು ದೇವೇಂದ್ರಪ್ಪ ಮನವಿ ಮಾಡಿದರು.

ADVERTISEMENT

ಮುಖಂಡ ಮೃತ್ಯುಂಜಯ ಜಿನಗಾ ಮಾತನಾಡಿ, ‘ಮೋದಿಯವರ ಆಡಳಿತದ ಅವಧಿಯಲ್ಲಿ ಭಾರತಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಮನ್ನಣೆ ಸಿಕ್ಕಿದೆ. ಅಲ್ಲದೇ ದೊಡ್ಡ ಶಕ್ತಿಯಾಗಿ ಹೊರಹೊಮ್ಮಿದೆ. ಹಿಂದಿನ ಸರ್ಕಾರ ಮಾಡದ ಕೆಲಸವನ್ನು ಅವರು ಮಾಡಿ ತೋರಿಸಿದ್ದಾರೆ. ಶುದ್ಧ ಆಡಳಿತ ನೀಡಿದ್ದಾರೆ’ ಎಂದು ಹೇಳಿದರು.

ಮುಖಂಡರಾದ ವೈ. ಯಮುನೇಶ, ಬಸವರಾಜ ನಾಲತ್ವಾಡ, ಭರಮನಗೌಡ, ಪಂಚಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.