ADVERTISEMENT

ಕಾನಹೊಸಹಳ್ಳಿ: ಸೇತುವೆಗೆ ಕಾರು ಡಿಕ್ಕಿ, ಚಾಲಕ ಸಾವು

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 2:19 IST
Last Updated 8 ಸೆಪ್ಟೆಂಬರ್ 2020, 2:19 IST

ಕಾನಹೊಸಹಳ್ಳಿ: ಸಮೀಪದ ಆಲೂರು ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸೋಮವಾರ ಸೇತುವೆಗೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ಕುಡಿಯುವ ನೀರು ಮತ್ತು ನೈರ್ಮಲೀಕರಣ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿದ್ದ ಹಗರಿಬೊಮ್ಮನ ಹಳ್ಳಿ ಹನಸಿ ಗ್ರಾಮದ ಗುರುಬಸವರಾಜ (35) ಮೃತರು.

ಅವರು ಸೋಮವಾರ ಹನಸಿಗೆ ಬರುತ್ತಿರುವಾಗ ಅಪಘಾತ ಸಂಭವಿಸಿದೆ. ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.