ADVERTISEMENT

ಬೈಕ್‌ಗೆ ಕಾರು ಡಿಕ್ಕಿ; ಬೈಕ್ ಸವಾರ ಸಾವು; ಹೆದ್ದಾರಿ ತಡೆದು ಸ್ಥಳೀಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2022, 13:07 IST
Last Updated 24 ಫೆಬ್ರುವರಿ 2022, 13:07 IST
ಬೈಕ್ ಗೆ ಕಾರು ಡಿಕ್ಕಿ ಬೈಕ್ ಸವಾರ ಸಾವು; ಹೆದ್ದಾರಿ ತಡೆದು ಸ್ಥಳೀಯರ ಪ್ರತಿಭಟನೆ
ಬೈಕ್ ಗೆ ಕಾರು ಡಿಕ್ಕಿ ಬೈಕ್ ಸವಾರ ಸಾವು; ಹೆದ್ದಾರಿ ತಡೆದು ಸ್ಥಳೀಯರ ಪ್ರತಿಭಟನೆ   

ಕಾನಹೊಸಹಳ್ಳಿ: ಸಮೀಪದ ಎಂ.ಬಿ.ಅಯ್ಯನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ರಸ್ತೆ ದಾಟುವಾಗ ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲೇ ಮೃತಪಟ್ಟಿದ್ದಾರೆ.

ಎಂ.ಬಿ.ಅಯ್ಯನಹಳ್ಳಿಯ ಶಿವಪ್ರಸಾದ್ (52) ಮೃತ, ಎಕ್ಸ್ ಎಲ್ ಬೈಕ್ ನಲ್ಲಿ ಹೆದ್ದಾರಿ ದಾಟುವ ಸಂದರ್ಭದಲ್ಲಿ ಹೊಸಪೇಟೆ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.

ಸ್ಥಳೀಯರು ಕೆಲ ಕಾಲ ಹೆದ್ದಾರಿ ತಡೆದು ಅಂಡರ್ ಪಾಸ್, ನಿರ್ಮಿಸುವಂತೆ ಒತ್ತಾಯಿಸಿ ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಕೆಲವೊತ್ತು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ADVERTISEMENT

ಸ್ಥಳಕ್ಕೆ ತಹಶೀಲ್ದಾರ್ ಜಗದೀಶ, ಡಿಎಸ್ಪಿ ಹರೀಶ್ ರೆಡ್ಡಿ, ಕೊಟ್ಟೂರು ಸಿಪಿಐ ಸೋಮಶೇಖರ ಕೆಂಚರೆಡ್ಡಿ ಭೇಟಿ ನೀಡಿ ಪ್ರತಿಭಟನ‌ ಕಾರರನ್ನು ಮನವೊಲಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.