ADVERTISEMENT

ಡಿಕೆಶಿಗೆ ಕೆಪಿಸಿಸಿ ಸಾರಥ್ಯ: ಅಭಿಮಾನಿ ಬಳಗದಿಂದ ಸಂಭ್ರಮಾಚರಣೆ

101 ಕಾಯಿ ಒಡೆದು ಗಾಳೆಮ್ಮ ದೇವಿಗೆ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 9:29 IST
Last Updated 13 ಮಾರ್ಚ್ 2020, 9:29 IST
ಡಿಕೆಶಿ ಅಭಿಮಾನಿಗಳ ಸಂಭ್ರಮಾಚರಣೆ
ಡಿಕೆಶಿ ಅಭಿಮಾನಿಗಳ ಸಂಭ್ರಮಾಚರಣೆ   

ಹೊಸಪೇಟೆ: ಡಿ.ಕೆ.ಶಿವಕುಮಾರ ಅವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಸಾರಥ್ಯ ವಹಿಸಿರುವುದಕ್ಕೆ ಅವರ ಅಭಿಮಾನಿ ಬಳಗದವರು ಶುಕ್ರವಾರ ನಗರದಲ್ಲಿ ಸಂಭ್ರಮಾಚರಣೆ ಮಾಡಿದರು.

ನಗರದ ರೋಟರಿ ವೃತ್ತದಲ್ಲಿ ಸೇರಿದ ಬಳಗದವರು, ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಶಿವಕುಮಾರ ಭಾವಚಿತ್ರ, ಅವರ ಛಾಯಾಚಿತ್ರವಿರುವ ಧ್ವಜಗಳನ್ನು ಹಿಡಿದುಕೊಂಡು ಅವರ ಪರ ಘೋಷಣೆಗಳನ್ನು ಕೂಗಿದರು.

ಇದಕ್ಕೂ ಮುನ್ನ ತಾಲ್ಲೂಕಿನ ಹಂಪಿ ರಸ್ತೆಯ ಗಾಳೆಮ್ಮ ದೇವಸ್ಥಾನದಲ್ಲಿ ಗಾಳೆಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, 101 ಕಾಯಿ ಒಡೆದರು. ಅಲ್ಲಿಂದ ನಗರದ ವರೆಗೆ ರ್‍ಯಾಲಿ ನಡೆಸಿದರು.

ADVERTISEMENT

ಸಂಘದ ಅಧ್ಯಕ್ಷ ಎಸ್‌.ಜಿ. ಮಂಜುನಾಥ ಮಾತನಾಡಿ, ‘ಡಿ.ಕೆ. ಶಿವಕುಮಾರ ಅವರು ತಳಹಂತದಿಂದ ಬೆಳೆದು ಬಂದ ನಾಯಕರು. ಅವರಿಗೆ ಜನರ ಕಷ್ಟ–ಸುಖ ಏನೆಂಬುದು ಗೊತ್ತು. ಕಷ್ಟಕಾಲದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಕೈಹಿಡಿದು ಬೆಳೆಸಿದ್ದಾರೆ. ಅವರ ನಾಯಕತ್ವದಲ್ಲಿ ಪಕ್ಷ ಮತ್ತಷ್ಟು ಸಂಘಟನೆ ಹೊಂದಿ, ಬರುವ ದಿನಗಳಲ್ಲಿ ಅಧಿಕಾರಕ್ಕೆ ಬರುವುದು ಖಚಿತ’ ಎಂದು ಭರವಸೆ ವ್ಯಕ್ತಪಡಿಸಿದರು.

ಸಂಘದ ಮುಖಂಡರಾದ ಗುಜ್ಜಲ್‌ ನಾಗರಾಜ, ವೀರಸ್ವಾಮಿ, ಅಯ್ಯಾಳಿಮೂರ್ತಿ, ಶೇಕ್ಷಾವಲಿ, ಕೃಷ್ಣಾ, ಸಂಜಯ್, ರಮೇಶ, ಗಣೇಶ್‌, ಕುಬೇರ್‌ ದಲ್ಲಾಲಿ, ತಿಮ್ಮಪ್ಪ ಯಾದವ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.