ADVERTISEMENT

ಅಧಿಕಾರಿಗಳಿಗೆ ನೀತಿ ಸಂಹಿತೆ ಪಾಠ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2023, 12:55 IST
Last Updated 27 ಮಾರ್ಚ್ 2023, 12:55 IST
ಚುನಾವಣಾ ನೋಡಲ್‌ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳಿಗೆ ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಾದರಿ ನೀತಿ ಸಂಹಿತೆ ಕುರಿತ ಕಾರ್ಯಾಗಾರದಲ್ಲಿ ಸಿಐಡಿ ಕಾನೂನು ಸಲಹೆಗಾರ ಮಹೇಶ್ ವೈದ್ಯ ಮಾತನಾಡಿದರು
ಚುನಾವಣಾ ನೋಡಲ್‌ ಅಧಿಕಾರಿಗಳು, ಪೊಲೀಸ್‌ ಅಧಿಕಾರಿಗಳಿಗೆ ಹೊಸಪೇಟೆಯಲ್ಲಿ ಸೋಮವಾರ ಏರ್ಪಡಿಸಿದ್ದ ಮಾದರಿ ನೀತಿ ಸಂಹಿತೆ ಕುರಿತ ಕಾರ್ಯಾಗಾರದಲ್ಲಿ ಸಿಐಡಿ ಕಾನೂನು ಸಲಹೆಗಾರ ಮಹೇಶ್ ವೈದ್ಯ ಮಾತನಾಡಿದರು   

ಹೊಸಪೇಟೆ (ವಿಜಯನಗರ): ಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿ ಕುರಿತು ಸಿಐಡಿ ಕಾನೂನು ಸಲಹೆಗಾರ ಮಹೇಶ್ ವೈದ್ಯ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಾಗಾರದಲ್ಲಿ ನೋಡಲ್‌ ಅಧಿಕಾರಿಗಳು ಹಾಗೂ ಪೊಲೀಸರಿಗೆ ಪಾಠ ಮಾಡಿದರು.

ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ದಾಖಲಿಸುವಾಗ ಹಿಂದಿನ ಪ್ರಕರಣಗಳ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ಹೀಗಾದಾಗ ವಿಷಯವನ್ನು ಸುಲಭವಾಗಿ ನಿಭಾಯಿಸಬಹುದು. ಮತದಾರರನ್ನು ಸೆಳೆಯಲು ವಿವಿಧ ರೀತಿಯ ಉಡುಗೊರೆ ಕೊಡಲಾಗುತ್ತದೆ. ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಹಣ ಸಾಗಾಟ ಮಾಡಲಾಗುತ್ತದೆ. ಚೆಕ್‌ಪೋಸ್ಟ್‌ಗಳಲ್ಲಿರುವ ಅಧಿಕಾರಿಗಳು, ಸಿಬ್ಬಂದಿ ಕೂಲಂಕಷವಾಗಿ ವಾಹನಗಳನ್ನು ಪರಿಶೀಲಿಸಿ ಆಯಾ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ಅಧಿಕಾರಿಗಳು ದಾಖಲಿಸುವ ಪ್ರಕರಣಗಳನ್ನು ಆಧರಿಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.

ಹಣ ಅಥವಾ ಉಡುಗೊರೆಗಳ ರೂಪದಲ್ಲಿ ಸಿಗುವ ಸಾಮಗ್ರಿ ಅಥವಾ ಹಣದ ಮೂಲ, ಅದರ ಮಾಲೀಕತ್ವದ ಮಾಹಿತಿ ಜೊತೆಗೆ ಅದನ್ನು ಯಾರಿಗೆ ಸಾಗಿಸಲು ಮುಂದಾಗಿದ್ದರು ಎಂಬ ಮಾಹಿತಿಯು ಮುಖ್ಯವಾಗಿರುತ್ತದೆ. ಸಮಗ್ರ ತನಿಖೆಗೆ ಅವಶ್ಯವಿರುವ ಮಾಹಿತಿಯನ್ನು ದೂರು ದಾಖಲಿಸುವ ವೇಳೆ ದಾಖಲಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ., ಯೋಜನಾ ನಿರ್ದೇಶಕ ಚಂದ್ರಶೇಖರ್, ಉಪವಿಭಾಗಧಿಕಾರಿ ಸಿದ್ದರಾಮೇಶ್ವರ, ಡಿವೈಎಸ್ಪಿ ವಿಶ್ವನಾಥ್ ರಾವ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಜಿ.ವಿ. ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.