ಸಂಡೂರು: ‘ಮಸಣ ಕಾರ್ಮಿಕರಿಗೆ 45 ವರ್ಷ ದಾಟಿದ ನಂತರ ಮಾಸಿಕ ₹3000 ಪಿಂಚಣಿ ನೀಡಬೇಕು’ ಎಂದು ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘದ ತಾಲ್ಲೂಕು ಕಾರ್ಯದರ್ಶಿ ಎಚ್. ದುರುಗಮ್ಮ ಒತ್ತಾಯಿಸಿದ್ದಾರೆ.
ಕುಣಿ ತೆಗೆಯುವ ಮತ್ತು ಶವ ಹೂಳುವ ಕೆಲಸವನ್ನು ಉದ್ಯೋಗ ಖಾತ್ರಿಯಡಿ ತಂದು ಸುರಕ್ಷತಾ ಪರಿಕರಗಳನ್ನು ಒದಗಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
‘ಮಸಣ ಕಾರ್ಮಿಕರನ್ನು ಗುರುತಿಸಿ ಅವರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರವರ್ಗದಡಿ ಮೀಸಲಾತಿ ನೀಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ಸ್ವಾಗತಿಸುತ್ತೇವೆ. ಇದೇ ಮೀಸಲಾತಿ ಉನ್ನತ ಶಿಕ್ಷಣ ಹಾಗೂ ಆರ್ಥಿಕ ಸೌಲಭ್ಯಗಳಿಗೂ ಮುಂದುವರಿಸಬೇಕು. ಮಸಣ ಕಾರ್ಮಿಕರ ಗಣತಿ ನಡೆಸಿ ಪುನರ್ವಸತಿಗೆ ಕ್ರಮವಹಿಸಬೇಕು. ಕುಣಿತ ಅಗೆಯುವ ಮತ್ತು ಮುಚ್ಚುವ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳ ಮೂಲಕ ಕನಿಷ್ಠ ₹4,000 ಕೂಲಿ ಪಾವತಿಸುವಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.