ಸಿರುಗುಪ್ಪ: ‘ಕಾಂಗ್ರೆಸ್ ಪಕ್ಷ ಸ್ವತಃ ಭ್ರಷ್ಟಾಚಾರದ ಗಾಜಿನ ಮನೆಯಾಗಿದೆ. ಆದರೆ, ಬಿಜೆಪಿಯನ್ನು ಕಮಿಷನ್ ಸರ್ಕಾರವೆಂದು ಆರೋಪಿಸುತ್ತಿರುವುದು ಸರಿಯೇ?’ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಪ್ರಶ್ನಿಸಿದರು.
ಸೋಮವಾರ ಸಂಜೆ ಇಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಯಾವುದೇ ಸಾಕ್ಷಿ ಕೊಡದೆ ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿದೆ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿ.ಕೆ ಶಿವಕುಮಾರ್ ಇವರೆಲ್ಲ ಭ್ರಷ್ಟಾಚಾರ ಮಾಡಿ ಜಾಮೀನಿನ ಮೇಲೆ ಹೊರಗಿದ್ದಾರೆ ಎಂದು ಕುಟುಕಿದರು.
ತಾಲ್ಲೂಕಿನಲ್ಲಿ ಹಿಂದೆ ಕಾಂಗ್ರೆಸ್ ಶಾಸಕರಿದ್ದಾಗ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ನೆರೆಹಾವಳಿ ಸಂದರ್ಭದಲ್ಲಿ ಜನರಿಗೆ ಸಹಾಯ ಮಾಡಲಿಲ್ಲ. ಆದರೆ, ಹಾಲಿ ಬಿಜೆಪಿ ಶಾಸಕ ಸೋಮಲಿಂಗಪ್ಪ ತುಂಗಭದ್ರಾ ಜಲಾಶಯಕ್ಕೆ ಸಮನಾಂತರ ಜಲಾಶಯ ನಿರ್ಮಿಸಿ 40 ಟಿಎಂಸಿ ನೀರನ್ನು ಉಳಿಸುವ ಸಲುವಾಗಿ ವಿಧಾನಸೌಧದಲ್ಲಿ ದನಿ ಎತ್ತಿದರು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.