ಹೊಸಪೇಟೆ: ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಕಾಣೆಯಾಗಿದ್ದು, ಅವರನ್ನು ಹುಡುಕಿಕೊಡಬೇಕೆಂದು ಜಿಲ್ಲಾ ಕಾಂಗ್ರೆಸ್ ಬುಧವಾರ ಸಂಜೆ ಇಲ್ಲಿನ ಪಟ್ಟಣ ಠಾಣೆಗೆ ದೂರು ಕೊಟ್ಟಿದೆ.
ಕ್ಷೇತ್ರದಲ್ಲಿ ಬರಗಾಲದ ವಾತಾವರಣ ಇದ್ದು, ಕುಡಿಯುವ ನೀರಿಗೆ ಸಮಸ್ಯೆಯಿದೆ. ಇಂತಹ ಸಂದರ್ಭದಲ್ಲಿ ಅವರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಹರಿಸಿ, ಬಲವಂತವಾಗಿ ಕೂಡಿ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಖಂಡರಾದ ಬಿ.ವಿ.ಶಿವಯೋಗಿ, ತಾರಿಹಳ್ಳಿ ವೆಂಕಟೇಶ, ಗುಜ್ಜಲ್ ನಾಗರಾಜ, ಮೊಹಮ್ಮದ್ ಇಮಾಮ್ ನಿಯಾಜಿ, ಸಣ್ಣ ಮಾರೆಪ್ಪ, ಫಹೀಮ್ ಬಾಷಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.