ADVERTISEMENT

ಧ್ರುವನಾರಾಯಣ ನಿಧನ; ಕಾಂಗ್ರೆಸ್‌ ಶ್ರದ್ಧಾಂಜಲಿ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 15:03 IST
Last Updated 11 ಮಾರ್ಚ್ 2023, 15:03 IST
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅವರಿಗೆ ಶನಿವಾರ ಹೊಸಪೇಟೆಯ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅವರಿಗೆ ಶನಿವಾರ ಹೊಸಪೇಟೆಯ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ಹೃದಯಸ್ತಂಭನದಿಂದ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ ಅವರಿಗೆ ನಗರದಲ್ಲಿ ಶನಿವಾರ ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಧ್ರುವನಾರಾಯಣ ಅವರು ದೀನ, ದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಸಂಸದರಾಗಿ ಉತ್ತಮ ಕೆಲಸ ಮಾಡಿದ್ದರು. ಅವರ ಅಕಾಲಿಕ ನಿಧನದಿಂದ ಪಕ್ಷ ಹಾಗೂ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.

ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಾಯಕ ಶೆಟ್ಟರ್, ಮುಖಂಡರಾದ ರಾಜಶೇಖರ್ ಹಿಟ್ನಾಳ್, ಎಂ.ಸಿ. ವೀರಸ್ವಾಮಿ, ಸೋಮಶೇಖರ್‌ ಬಣ್ಣದಮನೆ, ಗುಜ್ಜಲ್ ನಾಗರಾಜ್, ಲಿಂಗಣ್ಣ ನಾಯಕ, ಕುಮಾರ, ವಿಜಯ್ ಕುಮಾರ್, ವೀರಭದ್ರ ನಾಯಕ, ಬಾಬಾ ಅಲಿ, ಯೋಗಲಕ್ಷ್ಮಿ, ಮಂಜುಳಾ, ಸೋಹೆಲ್, ಜಾವಿದ್, ಸಣ್ಣ ಈರಪ್ಪ, ಮಾರೆಣ್ಣ ಇತರರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.