ADVERTISEMENT

ಡಿಕೆಶಿಗೆ ಜಾಮೀನು; ಕಾಂಗ್ರೆಸ್ಸಿಗರ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2019, 11:27 IST
Last Updated 24 ಅಕ್ಟೋಬರ್ 2019, 11:27 IST
ಕಾಂಗ್ರೆಸ್‌ ಕಾರ್ಯಕರ್ತರು ಹೊಸಪೇಟೆಯ ರೋಟರಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು
ಕಾಂಗ್ರೆಸ್‌ ಕಾರ್ಯಕರ್ತರು ಹೊಸಪೇಟೆಯ ರೋಟರಿ ವೃತ್ತದಲ್ಲಿ ವಿಜಯೋತ್ಸವ ಆಚರಿಸಿದರು   

ಹೊಸಪೇಟೆ: ಶಾಸಕ ಡಿ.ಕೆ. ಶಿವಕುಮಾರ ಅವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿರುವುದಕ್ಕೆ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಸಂಭ್ರಮಾಚರಣೆ ಮಾಡಿದರು.

ನಗರದ ರೋಟರಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ವಿನಿಮಯ ಮಾಡಿಕೊಂಡು ಖುಷಿಪಟ್ಟರು. ಡಿ.ಕೆ. ಶಿವಕುಮಾರ ಪರ, ಕಾಂಗ್ರೆಸ್‌ ಪರ ಘೋಷಣೆಗಳನ್ನು ಕೂಗಿದರು.

‘ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಡಿ.ಕೆ. ಶಿವಕುಮಾರ ಅವರನ್ನು ಜಾರಿ ನಿರ್ದೇಶನಾಲಯದ ಮೂಲಕ ಬಂಧಿಸಿತ್ತು. ಆದರೆ, ನ್ಯಾಯಾಲಯದ ತೀರ್ಪು ಬಿಜೆಪಿಗೆ ನಿರಾಸೆ ಮೂಡಿಸಿದೆ. ಇದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಚುನಾವಣೆಯಲ್ಲಿ ಬಿಜೆಪಿ ಸೋಲುವುದು ನಿಶ್ಚಿತ’ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಇಮಾಮ್‌ ನಿಯಾಜಿ ಹೇಳಿದರು.

ADVERTISEMENT

ಕಮಲಾಪುರ ಬ್ಲಾಕ್ ಸಮಿತಿ ಅಧ್ಯಕ್ಷ ವಿ.ಸೋಮಪ್ಪ, ಮುಖಂಡರಾದ ಗುಜ್ಜಲ್ ನಾಗರಜ್, ಭಾಗ್ಯಲಕ್ಷ್ಮಿ ಭರಾಡೆ,ತಾರಿಹಳ್ಳಿ ವೆಂಕಟೇಶ್, ಸತ್ಯ ನಾರಾಯಣ, ತೇಜ ನಾಯ್ಕ, ನಿಂಬಗಲ್ ರಾಮಕೃಷ್ಣ, ಧನಲಕ್ಷ್ಮಿ, ಶಮಾ, ಗೌಸ್, ಮಲ್ಲಪ್ಪ, ಗಣೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.