ಹೊಸಪೇಟೆ: ಮಾನಸಿಕ ಖಿನ್ನತೆಗೆ ಒಳಗಾಗಿ ಕಾನ್ಸ್ಟೆಬಲ್ ಚಂದ್ರಕಾಂತ ಅವರ ಪತ್ನಿ ರಾಧಮ್ಮ (36) ಇಲ್ಲಿನ ಆಜಾದ್ ನಗರದ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಬುಧವಾರ ಮಧ್ಯಾಹ್ನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರಿಗೆ ಪತಿ, ಗಂಡು ಹಾಗೂ ಹೆಣ್ಣು ಮಗಳಿದ್ದಾಳೆ. ‘ರಾಧಮ್ಮ ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದರು. ಖಿನ್ನತೆಗೆ ಒಳಗಾಗಿ, ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ’ ಎಂದು ಪೊಲೀಸ್ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.