ADVERTISEMENT

ರೈತರೊಂದಿಗೆ ಸಮಾಲೋಚನೆ ಸಭೆ

ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆ ಹಿನ್ನೆಲೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 1:39 IST
Last Updated 19 ನವೆಂಬರ್ 2020, 1:39 IST
ಕಂಪ್ಲಿ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಕ್ಷೇತ್ರದ ರೈತರೊಂದಿಗೆ ಬುಧವಾರ ನಡೆದ ಸಮಾಲೋಚನೆ ಸಭೆಯಲ್ಲಿ ಶಾಸಕ ಜೆ.ಎನ್. ಗಣೇಶ್ ಮಾತನಾಡಿದರು
ಕಂಪ್ಲಿ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಕ್ಷೇತ್ರದ ರೈತರೊಂದಿಗೆ ಬುಧವಾರ ನಡೆದ ಸಮಾಲೋಚನೆ ಸಭೆಯಲ್ಲಿ ಶಾಸಕ ಜೆ.ಎನ್. ಗಣೇಶ್ ಮಾತನಾಡಿದರು   

ಕಂಪ್ಲಿ: ತುಂಗಭದ್ರಾ ಜಲಾಶಯ ನೀರಾವರಿ ಸಲಹಾ ಸಮಿತಿ(ಐಸಿಸಿ) ಸಭೆ ನ.21ರಂದು ನಡೆಯುವ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿಯ ಶಾಸಕರ ಜನಸಂಪರ್ಕ ಕಚೇರಿ ಆವರಣದಲ್ಲಿ ಕ್ಷೇತ್ರದ ರೈತರೊಂದಿಗೆ ಸಮಾಲೋಚನೆ ಸಭೆ ಜರುಗಿತು.

ಶಾಸಕ ಜೆ.ಎನ್. ಗಣೇಶ್ ಮಾತನಾಡಿ, ‘ರೈತರ ಅನುಕೂಲಕ್ಕಾಗಿ ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆ(ಎಚ್‍ಎಲ್‍ಸಿ)ಗೆ 2021ರ ಜನವರಿ 20ರ ವರೆಗೆ ಆನ್ ಆ್ಯಂಡ್ ಆಫ್ ಪದ್ಧತಿ ಕೈಬಿಟ್ಟು ನಿರಂತರವಾಗಿ ನೀರು ಹರಿಸಲು ಮತ್ತು ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆ(ಎಲ್‍ಎಲ್‍ಸಿ)ಗೆ 2021ರ ಏ.20ರ ವರೆಗೆ ಆಂಧ್ರಪ್ರದೇಶ ಮತ್ತು ಕರ್ನಾಟಕದ ಕೋಟಾ ನೀರು ಹರಿಸುವಂತೆ ಐಸಿಸಿ ಸಭೆಯಲ್ಲಿ ಒತ್ತಾಯಿಸಲಾಗುವುದು’ ಎಂದರು.

‘ಎಚ್‍ಎಲ್‍ಸಿಯ ಡಿ-3, ಡಿ-7, ಡಿ-12, ಡಿ-13, ಡಿ-14 ವಿತರಣಾ ಕಾಲುವೆಗೆ ನೀರಿನ ಪ್ರಮಾಣ ಹೆಚ್ಚಿಸುವಂತೆ ಮನವಿ ಮಾಡುವುದಾಗಿ’ ತಿಳಿಸಿದರು. ಸಭೆಯಲ್ಲಿ ಭಾಗವಹಿಸಿದ್ದ ಅನೇಕ ರೈತರು ಮಾತನಾಡಿ, ಆಂಧ್ರಪ್ರದೇಶದ ನೀರಾವರಿ ಇಲಾಖೆ ಅಧಿಕಾರಿಗಳಂತೆ ನಮ್ಮ ರಾಜ್ಯದ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ADVERTISEMENT

‘ಭತ್ತ ಖರೀದಿ ಕೇಂದ್ರ ಆರಂಭಿ ಸುವಂತೆ ಮತ್ತು ಸರ್ಕಾರದ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಭತ್ತ ಖರೀದಿ ಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ, ತುಂಗಭದ್ರಾ ಐಸಿಸಿ ಸಭೆಗೆ ರೈತರನ್ನು ಆಹ್ವಾನಿಸುವಂತೆ’ ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಗಿ ಮಲ್ಲಯ್ಯ, ರೈತ ಮುಖಂಡರಾದ ಚೆಲ್ಲಾ ವೆಂಕಟನಾಯ್ಡು, ಕೊಟ್ಟೂರು ರಮೇಶ್, ಕಾಸೀಂಸಾಬ್, ಎಂ. ರಾಘವೇಂದ್ರ, ಲಕ್ಷ್ಮಿಕಾಂತರೆಡ್ಡಿ, ಬಸವರಾಜ, ಸುರೇಶರೆಡ್ಡಿ, ರಾಮಪ್ಪ ಕಪ್ಪಗಲ್, ರಂಗಾರೆಡ್ಡಿ, ವೆಂಕಟರೆಡ್ಡಿ, ಸೂಗೂರಪ್ಪ, ತಿಮ್ಮಾರೆಡ್ಡಿ, ಮಲ್ಲಿ ಕಾರ್ಜುನ, ವೆಂಕಟರಾಮರಾಜು, ತಾ. ಪಂ. ಸದಸ್ಯ. ಕೆ. ಷಣ್ಮುಖಪ್ಪ, ಈರಣ್ಣ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.