ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ಪಟ್ಟಣದ ವಿಜಯನಗರ ಬಡಾವಣೆ ನಿವಾಸಿ,ಗುರುವಾರ ಹಸೆಮಣೆ ಏರಿದ್ದ ನವ ವಿವಾಹಿತ ಬಸವರಾಜ ಭಜಂತ್ರಿ (36)ಕೋವಿಡ್ ನಿಂದ ಶುಕ್ರವಾರ ಮೃತಪಟ್ಟಿದ್ದಾರೆ.
ಪಟ್ಟಣದ ಶಾದಿ ಮಹಲ್ ನಲ್ಲಿ ಅವರ ವಿವಾಹ ಜರುಗಿತ್ತು. ಮದುವೆ ಕಾರ್ಯದ ಬಳಿಕ ಅಸ್ವಸ್ಥಗೊಂಡು ವಿಶ್ರಾಂತಿಯಲ್ಲಿದ್ದ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾಗಿದೆ. ಚಿಕಿತ್ಸೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮೃತದೇಹದ ಗಂಟಲುದ್ರವ ತಪಾಸಣೆ ನಡೆಸಿದಾಗ ಕೋವಿಡ್ ತಗುಲಿದ್ದು ದೃಢಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.