ADVERTISEMENT

ಪೌರಕಾರ್ಮಿಕರೊಂದಿಗೆ ಊಟ ಮಾಡಿದ ಡಿ.ಸಿ.

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2019, 14:35 IST
Last Updated 4 ಮಾರ್ಚ್ 2019, 14:35 IST
ಪೌರ ಕಾರ್ಮಿಕರಿಗೆ ಆಹಾರ ಬಡಿಸಿದ ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌
ಪೌರ ಕಾರ್ಮಿಕರಿಗೆ ಆಹಾರ ಬಡಿಸಿದ ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌   

ಹೊಸಪೇಟೆ: ಜಿಲ್ಲಾಧಿಕಾರಿ ರಾಮಪ್ರಸಾದ್‌ ಮನೋಹರ್‌ ಅವರು ಸೋಮವಾರ ತಾಲ್ಲೂಕಿನ ಕಮಲಾಪುರ ಪಟ್ಟಣದಲ್ಲಿ ಪೌರ ಕಾರ್ಮಿಕರೊಂದಿಗೆ ಊಟ ಮಾಡಿದರು.

ಮೊದಲಿಗೆ ಜಿಲ್ಲಾಧಿಕಾರಿಯವರು ಪೌರ ಕಾರ್ಮಿಕರಿಗೆ ಆಹಾರ ಬಡಿಸಿದರು. ನಂತರ ಅವರೊಂದಿಗೆ ಊಟ ಮಾಡಿದರು.

ಬಳಿಕ ಮಾತನಾಡಿದ ಅವರು, ‘ಹಂಪಿ ಉತ್ಸವದ ಯಶಸ್ಸಿನಲ್ಲಿ ಪೌರ ಕಾರ್ಮಿಕರ ಪಾತ್ರ ಬಹಳ ದೊಡ್ಡದಿದೆ. ಉತ್ಸವದ ಸಂದರ್ಭದಲ್ಲಿ ಸಹಸ್ರಾರು ಜನ ಹಂಪಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ವಚ್ಛತೆಗೆ ಹಗಲಿರುಳು ಶ್ರಮಿಸಿದ್ದಾರೆ. ಅವರಿಂದಾಗಿ ಇಡೀ ಹಂಪಿ ಪರಿಸರದಲ್ಲಿ ಅಸ್ವಚ್ಛತೆ ಇರಲಿಲ್ಲ. ಜಿಲ್ಲಾ ಆಡಳಿತ ಅವರಿಗೆ ಕೃತಜ್ಞತೆ ಸಲ್ಲಿಸುತ್ತದೆ’ ಎಂದರು.

ADVERTISEMENT

ತಹಶೀಲ್ದಾರ್‌ ಎಚ್‌. ವಿಶ್ವನಾಥ್‌, ನಗರಸಭೆ ಪೌರಾಯುಕ್ತ ವಿ. ರಮೇಶ್‌, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶಿವಕುಮಾರ ಕಟ್ಟಿಮನಿ ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.