ADVERTISEMENT

ಕೋಟೆ ನಾಶಪಡಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜುಲೈ 2019, 13:52 IST
Last Updated 2 ಜುಲೈ 2019, 13:52 IST
ರಾಜ್ಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ನಾಯ್ಕ ಅವರಿಗೆ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು
ರಾಜ್ಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ನಾಯ್ಕ ಅವರಿಗೆ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ: ತಾಲ್ಲೂಕಿನ ಕಮಲಾಪುರದ ಪುರಾತನ ಕೋಟೆ ನಾಶಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ.

ವೇದಿಕೆಯ ಪದಾಧಿಕಾರಿಗಳು ಮಂಗಳವಾರ ಈ ಸಂಬಂಧ ತುಂಗಭದ್ರಾ ಮಂಡಳಿಯ ಉಪ ವಿಭಾಗ ಅಧಿಕಾರಿ ದೇವೇಂದ್ರಪ್ಪ, ರಾಜ್ಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ನಾಯ್ಕ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

‘ವಿಜಯನಗರ ಅರಸರ ಕಾಲದಲ್ಲಿ ನಿರ್ಮಾಣಗೊಂಡಿರುವ ಕೋಟೆಯನ್ನು ಜೆ.ಸಿ.ಬಿ. ಬಳಸಿ ರಾಜಾರೋಷವಾಗಿ ನಾಶಗೊಳಿಸಲಾಗಿದೆ. ಹಾಡಹಗಲೇ ಇಷ್ಟೆಲ್ಲ ನಡೆದರೂ ಅಧಿಕಾರಿಗಳು ಮೌನ ವಹಿಸಿರುವುದು ಸರಿಯಲ್ಲ. ಅದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಕೋಟೆಯಿದ್ದ ಸ್ಥಳದಲ್ಲಿಯೇ ಪುನರ್‌ ನಿರ್ಮಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ವೇದಿಕೆಯ ವಿಭಾಗ ಕಾರ್ಯದರ್ಶಿ ಮೌನೇಶ್‌ ಬಡಿಗೇರ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್‌ ಕುಮಾರ್‌, ಗ್ರಾಮೀಣ ಕಾರ್ಯದರ್ಶಿ ಗಣೇಶ್‌ ನೀರ್ಲಿಗಿ, ತಾಲ್ಲೂಕು ಅಧ್ಯಕ್ಷ ಸಿದ್ದೇಶ್‌ ಪೂಜಾರ, ಹೋರಾಟ ಪ್ರಮುಖ ಓಬಯ್ಯ ಜೋಗದ ಮನವಿಗೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.