ADVERTISEMENT

ವೀಲಿಂಗ್‌ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2023, 12:19 IST
Last Updated 8 ಫೆಬ್ರುವರಿ 2023, 12:19 IST
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದವರು ಬುಧವಾರ ಹೊಸಪೇಟೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರಿಗೆ ಮನವಿ ಪತ್ರ ಸಲ್ಲಿಸಿದರು
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದವರು ಬುಧವಾರ ಹೊಸಪೇಟೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ನಗರದಲ್ಲಿ ಬೈಸಿಕಲ್‌, ಬೈಕ್‌ ವೀಲಿಂಗ್‌ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಅದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಕನ್ನಡಪರ ಸಂಘಟನೆಗಳ ಒಕ್ಕೂಟ) ಜಿಲ್ಲಾ ಘಟಕ ಆಗ್ರಹಿಸಿದೆ.

ಈ ಸಂಬಂಧ ವೇದಿಕೆಯ ಮುಖಂಡರು ಬುಧವಾರ ನಗರದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್‌. ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ಪುಂಡ ಹುಡುಗರು ಸೈಲೆನ್ಸರ್‌ ತೆಗೆದು ಬೈಕ್‌ ವೀಲಿಂಗ್‌ ಮಾಡುತ್ತಿದ್ದಾರೆ. ಅತಿ ವೇಗವಾಗಿ ವಾಹನ ಓಡಿಸುತ್ತಿದ್ದಾರೆ. ನಗರದ ಕಾಲೇಜು ರಸ್ತೆ, ಬಸ್ ನಿಲ್ದಾಣ ರಸ್ತೆ, ವಾಲ್ಮೀಕಿ ವೃತ್ತ, ಬೈಪಾಸ್‌ಗಳಲ್ಲಿ ವೀಲಿಂಗ್‌ ಮಾಡುವುದು ಹೆಚ್ಚಾಗಿದೆ. ಇದರಿಂದ ಅನೇಕ ಅಪಘಾತಗಳು ಸಂಭವಿಸಿವೆ. ಅನೇಕರ ಬಳಿ ಡ್ರೈವಿಂಗ್‌ ಲೈಸೆನ್ಸ್‌ ಇಲ್ಲದಿದ್ದರೂ ವಾಹನಗಳನ್ನು ಬೇಕಾಬಿಟ್ಟಿ ಓಡಿಸುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ವಿಶೇಷ ತಂಡ ರಚಿಸಿ, ವೀಲಿಂಗ್‌ ಮಾಡುವವರ ವಿರುದ್ಧ ದಂಡ ಹೇರಿ ಕಾನೂನು ಕ್ರಮ ಜರುಗಿಸಬೇಕು. ವೀಲಿಂಗ್‌ ಮಾಡುವ ಹುಡುಗರ ಪೋಷಕರನ್ನು ಕರೆಸಿ ಎಚ್ಚರಿಕೆ ಕೊಡಬೇಕು. ಪದೇ ಪದೇ ವೀಲಿಂಗ್‌ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ತಾರಿಹಳ್ಳಿ ಹನುಮಂತಪ್ಪ, ಮುಖಂಡರಾದ ಎನ್.ಎಚ್. ಶ್ರೀನಿವಾಸ, ಎಸ್.ಎಂ. ಜಾಫರ್, ರಾಮಕೃಷ್ಣ ಕಾರಿಗನೂರು, ಈಡಿಗರ ರಮೇಶ್, ಕೊಟ್ರೇಶ್, ಕಂಪ್ಲಿ ಲಕ್ಷ್ಮಣ, ರುದ್ರಪ್ಪ ಜೋಗಿ, ವಿರೂಪಾಕ್ಷಿ. ಟಿಪ್ಪು ಮಹಮ್ಮದ್, ಗಾಳೇಶ್, ಮಾರೇಶ್, ರವಿ, ಸೂರಿ ಲೋಕೇಶ್, ಈ. ಸ್ವಾಮಿ, ವೆಂಕಟೇಶ್ ರಾಜಶೇಖರ್, ಮೆಹಬೂಬ್ ಬಾಷ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.