ಬಳ್ಳಾರಿ: ಒಣಮೆಣಸಿನಕಾಯಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಬೆಂಬಲ ಬೆಲೆ ಘೋಷಿಸಬೇಕು. ಬಳ್ಳಾರಿಯಲ್ಲಿ ಒಣಮೆಣಸಿನಕಾಯಿ ಮಾರುಕಟ್ಟೆ ಸ್ಥಾಪಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆಯ ಸದಸ್ಯರು ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಇಲ್ಲಿನ ಅವ್ವಮ್ಮನಭಾವಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ರೈತರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಧರಣಿ ನಡೆಸಿದರು.
ಸಂಘಟನೆಯ ಅಧ್ಯಕ್ಷ ಕರೂರು ಮಾಧವ ರೆಡ್ಡಿ ಮಾತನಾಡಿ, ‘ಬಳ್ಳಾರಿ ಸೇರಿ 10 ಜಿಲ್ಲೆಗಳಲ್ಲಿ ಮೆಣಸಿನಕಾಯಿ ಬೆಳೆಯಲಾಗುತ್ತಿದೆ. ಬಳ್ಳಾರಿ ಒಂದರಲ್ಲೇ ಒಂದೂವರೆ ಲಕ್ಷ ಟನ್ಗೂ ಹೆಚ್ಚು ಉತ್ಪಾದನೆ ಆಗುತ್ತದೆ. ಬೆಂಬಲ ಬೆಲೆ ನೀಡಲು ಕೋರಿ ಜಿಲ್ಲೆಯ ಐವರು ಶಾಸಕರು ಮತ್ತು ಸಂಸದರಿಗೂ ಮನವಿ ಪತ್ರ ಕೊಟ್ಟಿದ್ದೇವೆ. ಅವರಿಂದ ಭರವಸೆ ಹೊರತುಪಡಿಸಿ ಮತ್ತೇನೂ ಸಿಕ್ಕಿಲ್ಲ. ಎಲ್ಲರೂ ಸೇರಿ, ರೈತರನ್ನು ಬೀದಿಗೆ ತಂದಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಂಘಟನೆಯ ಗೌರವಾಧ್ಯಕ್ಷ ಸಾ. ರಘುನಾಥ ಮಾತನಾಡಿ, ‘ಮಾರುಕಟ್ಟೆಯಲ್ಲಿ ಕಾರ್ಪೊರೇಟ್ ದೌರ್ಜನ್ಯ ಸ್ಥಗಿತಗೊಳ್ಳಬೇಕು. ರೈತರು ತಮ್ಮ ಬೆಳೆಗೆ ತಾವೇ ಬೆಲೆ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣವೇ ಆಂಧ್ರಪ್ರದೇಶದ ಮಾದರಿಯಲ್ಲಿ ಒಣಮೆಣಸಿನಕಾಯಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು. ರೈತರ ಹೋರಾಟಕ್ಕೆ ಸ್ಪಂದಿಸಬೇಕುಕರೂರು ಮಾಧವ ರೆಡ್ಡಿ ಅಧ್ಯಕ್ಷ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.