ಬಳ್ಳಾರಿ: ಜನೌಷಧ ಕೇಂದ್ರಗಳನ್ನು ಮುಚ್ಚದಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕನ್ನಡನಾಡು ರೈತ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಸಂಘದ ಅಧ್ಯಕ್ಷ ಈಶ್ವರಪ್ಪ ಮೆಣಸಿನ ಮಾತನಾಡಿ, ‘ರಾಜ್ಯದ 182 ಜನೌಷಧ ಕೇಂದ್ರಗಳನ್ನು ಮುಚ್ಚುವುದು ಜನ ವಿರೋಧಿ ನೀತಿ. ಬಡ ರೈತರು, ಕೂಲಿ ಕಾರ್ಮಿಕರು ಮಧ್ಯಮ ವರ್ಗದ ರೋಗಿಗಳಿಗೆ ಬಹಳ ಕಡಿಮೆ ಧರಗಳಲ್ಲಿ ಔಷಧ ದೊರೆಯುತ್ತದೆ. ಯಾವುದೇ ಕಾರಣಕ್ಕೆ ಜನೌಷಧ ಕೇಂದ್ರಗಳನ್ನು ತೆಗೆಯಬಾರದು’ ಎಂದು ಒತ್ತಾಯಿಸಿದರು.
ಸಂಘದ ಪದಾಕಾರಿಗಳಾದ ಬಿ.ಕೆ.ಶಿವಪ್ಪ, ಗಂಗಾಧರ್, ರಾಜಶೇಖರ್, ಮಂಜುನಾಥ್, ಶಿವರಾಜು, ಎರ್ರಿಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.