ADVERTISEMENT

ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 10:23 IST
Last Updated 10 ಸೆಪ್ಟೆಂಬರ್ 2020, 10:23 IST
ವಿಜಯನಗರ ಮಾದಿಗ ಸಮಾಜ ಸಂಘಟನೆಯವರು ಗುರುವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ವಿಜಯನಗರ ಮಾದಿಗ ಸಮಾಜ ಸಂಘಟನೆಯವರು ಗುರುವಾರ ಹೊಸಪೇಟೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಹೊಸಪೇಟೆ: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಯಥಾವತ್‌ ಜಾರಿಗೆ ಆಗ್ರಹಿಸಿ ವಿಜಯನಗರ ಮಾದಿಗ ಸಮಾಜ ಸಂಘಟನೆಯವರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಂತರ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ ಎಚ್‌. ವಿಶ್ವನಾಥ್‌ ಅವರಿಗೆ ಸಲ್ಲಿಸಿದರು.

‘ಒಳಮೀಸಲಾತಿ ಜಾರಿಗೆ ತರುವುದರ ಬಗ್ಗೆ ಮರು ಪರಿಶೀಲನೆ ನಡೆಸಬೇಕೆಂದು ಸುಪ್ರೀಂಕೋರ್ಟ್‌ ಹೇಳಿದೆ. ಹಾಗಾಗಿ ರಾಜ್ಯ ಸರ್ಕಾರ ಆಯೋಗದ ವರದಿಯನ್ನು ಒಪ್ಪಿಕೊಂಡು, ವಿಧಾನಸಭೆಯಲ್ಲಿ ಮಂಡಿಸಿ ಒಳಮೀಸಲಾತಿಗೆ ಜಾರಿಗೆ ತರಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಜಗದೀಶ್‌ ಶೆಟ್ಟರ್‌ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿ ಜಾರಿಗೆ ತರುವುದಾಗಿ ಹುಬ್ಬಳ್ಳಿಯಲ್ಲಿ ಮಾದಿಗ ಸಮಾಜದ ಸಮಾವೇಶದಲ್ಲಿ ಭರವಸೆ ನೀಡಿದ್ದರು. ಈಗ ಅವರದೇ ಸರ್ಕಾರ ಇದ್ದು, ಕೊಟ್ಟ ಭರವಸೆ ಉಳಿಸಿಕೊಳ್ಳಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಮುಖಂಡರಾದ ಎಂ.ಸಿ.ವೀರಸ್ವಾಮಿ, ಬಿ.ಮಾರೆಣ್ಣ, ಗೋವಿಂದಪ್ಪ, ಎಸ್‌. ಯರಿಸ್ವಾಮಿ, ಇ.ಶೇಕ್ಷಾವಲಿ, ರಾಮಚಂದ್ರ, ಶೇಷು, ನಿಂಬಗಲ್ ರಾಮಕೃಷ್ಣ, ಆರ್‌.ಸಿ. ಭರತ್‍ಕುಮಾರ್, ಎಚ್‌.ಬಿ. ಶ್ರೀನಿವಾಸ, ವಿಜಯಕುಮಾರ್, ಲಕ್ಷ್ಮೀದೇವಿ, ಮಂಜುನಾಥ, ಓಬಳೇಶ್, ತಿರುಮಲೇಶ, ಪಂಪಾಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.