ADVERTISEMENT

ಬಿಜೆಪಿ ಅಭ್ಯರ್ಥಿ ಬಿರುಸಿನ ಪ್ರಚಾರ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 15:26 IST
Last Updated 16 ಏಪ್ರಿಲ್ 2019, 15:26 IST
ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪನವರು ಮಂಗಳವಾರ ಹುಡೇಂ ಗ್ರಾಮದಲ್ಲಿ ಪ್ರಚಾರ ನಡೆಸಿದರು
ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪನವರು ಮಂಗಳವಾರ ಹುಡೇಂ ಗ್ರಾಮದಲ್ಲಿ ಪ್ರಚಾರ ನಡೆಸಿದರು   

ಕಾನಹೊಸಹಳ್ಳಿ: ಬಿಜೆಪಿ ಅಭ್ಯರ್ಥಿ ವೈ. ದೇವೇಂದ್ರಪ್ಪನವರು ಮಂಗಳವಾರ ಇಲ್ಲಿನ ಹುಡೇಂ ಗ್ರಾಮದಲ್ಲಿ ಬಿರುಸಿನ ಪ್ರಚಾರ ಕೈಗೊಂಡರು.

ತೆರೆದ ವಾಹನದಲ್ಲಿ ಗ್ರಾಮದಲ್ಲಿ ಸಂಚರಿಸಿ, ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು.

‘ನಾನು ಜಿಲ್ಲೆಯ ಬಡ ರೈತನ ಮಗ. ನನಗೆ ಅಧಿಕಾರದ ಆಸೆ ಇಲ್ಲ. ಅಭಿವೃದ್ದಿ ಕನಸು ಹೊಂದಿರುವ ಈ ಬಾರಿ ನನ್ನನು ಗೆಲ್ಲಿಸಿದರೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ.ಯುವಕರು ಮತ್ತೊಮ್ಮೆ ಮೋದಿ ಪ್ರಧಾನಿಯಾಗಬೇಕೆಂದು ಬಯಸಿದ್ದಾರೆ. ಅವರಿಗೆ ಶಕ್ತಿ ನೀಡಲು ಬಳ್ಳಾರಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ನನ್ನನ್ನು ಗೆಲ್ಲಿಸಿದರೆ ಅವರಿಗೆ ಶಕ್ತಿ ನೀಡಿದಂತಾಗುತ್ತದೆ’ ಎಂದರು.

ADVERTISEMENT

ಶಾಸಕ ಎನ್.ವೈ.ಗೋಪಾಲಕೃಷ್ಣ,ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ರೇವಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೆಂಕಟೇಶ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಇ.ಬಿ. ಬಸವರಾಜ್,ಹುಡೇಂ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ, ಮುಖಂಡರಾದ ರಾಮಲಿಂಗಪ್ಪ,ಹುಡೇಂ ಪಾಪನಾಯಕ,ದೀನಾ ಮಂಜುನಾಥ, ಕೋಡಿಹಳ್ಳಿ ಭೀಮಪ್ಪ, ಬಂಗಾರಿ ಹನುಮಂತು, ಜಿ.ಟಿ.ಮಲ್ಲಿಕಾರ್ಜುನ ಗೌಡ, ರಾಮದುರ್ಗ ಪಾಪಣ್ಣ, ಕೆ.ಎಂ.ತಿಪ್ಪೇಸ್ವಾಮಿ, ಹುಲಿಕೆರೆ ಗೀತಾ, ಪ್ರಮೀಳಾಬಾಯಿ, ಮಂಡಲ ಅಧ್ಯಕ್ಷ ವೀರನಗೌಡ, ಎಕ್ಕಗೊಂದಿ ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.