ADVERTISEMENT

ಕೋವಿಡ್‌ನಿಂದ ಮೃತ ಕಾಂಗ್ರೆಸ್‌ ಮುಖಂಡನ ಮನೆಗೆ ಡಿ.ಕೆ. ಶಿವಕುಮಾರ ಭೇಟಿ, ಸಾಂತ್ವನ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 6:05 IST
Last Updated 23 ನವೆಂಬರ್ 2020, 6:05 IST
ಕೋವಿಡ್‌ನಿಂದ ಮೃತಪಟ್ಟ ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಭಗವಾನ್‌ ಫಹೀಂ ಬಾಷಾ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಭೇಟಿ
ಕೋವಿಡ್‌ನಿಂದ ಮೃತಪಟ್ಟ ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಭಗವಾನ್‌ ಫಹೀಂ ಬಾಷಾ ಅವರ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಭೇಟಿ   

ಹೊಸಪೇಟೆ: ಇತ್ತೀಚೆಗೆ ಕೋವಿಡ್‌ನಿಂದ ಮರಣ ಹೊಂದಿದ ಬಳ್ಳಾರಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಭಗವಾನ್‌ ಫಹೀಂ ಬಾಷಾ ಅವರ ನಗರದಲ್ಲಿನ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಸೋಮವಾರ ಭೇಟಿ ನೀಡಿದರು.

ಬಾಷಾ ಅವರ ಪತ್ನಿ ಕುಬ್ರ ಫಹೀಂ ಮತ್ತು ಕುಟುಂಬದ ಇತರೆ ಸದಸ್ಯರಿಗೆ ಸಾಂತ್ವನ ಹೇಳಿದರು. ಬಳಿಕ ಅವರು ರಾಯಚೂರು ಜಿಲ್ಲೆಯ ಮಸ್ಕಿಗೆ ಪ್ರಯಾಣ ಬೆಳೆಸಿದರು. ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಭಾನುವಾರ ನಗರಕ್ಕೆ ಬಂದಿದ್ದ ಶಿವಕುಮಾರ ಅವರು, ರಾತ್ರಿ ನಗರದಲ್ಲಿಯೇ ವಾಸ್ತವ್ಯ ಮಾಡಿದ್ದರು.

ರಾಜ್ಯಸಭೆ ಸದಸ್ಯ ಸೈಯದ್ ನಾಸೀರ್ ಹುಸೇನ್, ಶಾಸಕರಾದ ರಾಘವೇಂದ್ರ ಹಿಟ್ನಾಳ್‌, ಅಮರೇಗೌಡ ಬೈಯ್ಯಾಪುರ, ಪಿ.ಟಿ. ಪರಮೇಶ್ವರ ನಾಯ್ಕ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶಿವಯೋಗಿ, ಮುಖಂಡರಾದ ವಿ.ಎಸ್. ಉಗ್ರಪ್ಪ, ಶಿವರಾಜ ತಂಗಡಗಿ, ಮೊಹಮ್ಮದ್‌ ಇಮಾಮ್‌ ನಿಯಾಜಿ, ಕೆ. ಬಡಾವಲಿ, ಭಾಗ್ಯಲಕ್ಷ್ಮಿ ಭರಾಡೆ, ಕೆರೊಲಿನ್‌ ಲೂಸಿಯಾ, ರಜೀಯಾ ಬೇಗಂ, ಅಬೂಬಕರ್‌ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.