ADVERTISEMENT

‘ಪ್ರಜಾವಾಣಿ ವರದಿ ಫಲಶ್ರುತಿ’: ವಸ್ತ್ರ ಸಂಹಿತೆಯ ಬ್ಯಾನರ್‌ ತೆರವು

​ಪ್ರಜಾವಾಣಿ ವಾರ್ತೆ
Published 9 ಜನವರಿ 2021, 12:07 IST
Last Updated 9 ಜನವರಿ 2021, 12:07 IST
ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಹಾಕಿದ್ದ ವಸ್ತ್ರ ಸಂಹಿತೆಗೆ ಸಂಬಂಧಿಸಿದ ಬ್ಯಾನರ್‌ ಶನಿವಾರ ತೆರವುಗೊಳಿಸಿರುವುದು
ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಹಾಕಿದ್ದ ವಸ್ತ್ರ ಸಂಹಿತೆಗೆ ಸಂಬಂಧಿಸಿದ ಬ್ಯಾನರ್‌ ಶನಿವಾರ ತೆರವುಗೊಳಿಸಿರುವುದು   

ಹೊಸಪೇಟೆ: ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಹಾಕಿದ್ದ ವಸ್ತ್ರ ಸಂಹಿತೆಗೆ ಸಂಬಂಧಿಸಿದ ಬ್ಯಾನರ್‌ ಅನ್ನು ಧಾರ್ಮಿಕ ದತ್ತಿ ಇಲಾಖೆಯು ಶನಿವಾರ ತೆರವುಗೊಳಿಸಿದೆ.

‘ವಸ್ತ್ರ ಸಂಹಿತೆಗೆ ಗೊಂದಲ ಸೃಷ್ಟಿ’ ಶೀರ್ಷಿಕೆಯಡಿ ‘ಪ್ರಜಾವಾಣಿ’ ಶನಿವಾರ (ಜ.9) ವರದಿ ಪ್ರಕಟಿಸಿತ್ತು. ವರದಿಗೆ ಎಚ್ಚೆತ್ತ ಧಾರ್ಮಿಕ ದತ್ತಿ ಇಲಾಖೆಯು ಆ ಬ್ಯಾನರ್‌ ತೆರವು ಮಾಡಿದೆ.

ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವುದರ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಆದರೆ, ವಿರೂಪಾಕ್ಷೇಶ್ವರ ದೇಗುಲದ ಪ್ರವೇಶ ದ್ವಾರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಗಮನಕ್ಕೆ ತರದೆ ಖಾಸಗಿಯವರು ವಸ್ತ್ರ ಸಂಹಿತೆಯ ಬ್ಯಾನರ್‌ ಹಾಕಿದ್ದರು. ಇದು ಭಕ್ತರಲ್ಲಿ ಗೊಂದಲಕ್ಕೆ ಕಾರಣವಾಗಿತ್ತು. ಚರ್ಚೆಗೂ ಇಂಬು ನೀಡಿತ್ತು. ಪತ್ರಿಕೆಯಲ್ಲಿ ಬಂದ ವರದಿ ಆಧರಿಸಿ ಶನಿವಾರ ಅದನ್ನು ತೆರವುಗೊಳಿಸಿ ಇಲಾಖೆಯು ಗೊಂದಲಕ್ಕೆ ಇತಿಶ್ರೀ ಹಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.