ADVERTISEMENT

ಗ್ರಹಣ; ವಿರೂಪಾಕ್ಷ ದೇಗುಲ ಬಂದ್‌

​ಪ್ರಜಾವಾಣಿ ವಾರ್ತೆ
Published 16 ಜುಲೈ 2019, 14:13 IST
Last Updated 16 ಜುಲೈ 2019, 14:13 IST
ಚಂದ್ರ ಗ್ರಹಣದ ಪ್ರಯುಕ್ತ ಮಂಗಳವಾರ ಸಂಜೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲು ಮುಚ್ಚಿದ್ದರಿಂದ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು
ಚಂದ್ರ ಗ್ರಹಣದ ಪ್ರಯುಕ್ತ ಮಂಗಳವಾರ ಸಂಜೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲು ಮುಚ್ಚಿದ್ದರಿಂದ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು   

ಹೊಸಪೇಟೆ: ಚಂದ್ರ ಗ್ರಹಣದ ಪ್ರಯುಕ್ತ ತಾಲ್ಲೂಕಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲನ್ನು ಮಂಗಳವಾರ ಸಂಜೆ ಮುಚ್ಚಲಾಯಿತು.

ಸಂಜೆ 6.30ಕ್ಕೆ ದೇಗುಲ ಬಂದ್‌ ಮಾಡಿದ್ದರಿಂದ ಸಾರ್ವಜನಿಕರಿಗೆ ದೇವರ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಗ್ರಹಣ ವಿಷಯ ಗೊತ್ತಿದ್ದರಿಂದ ಭಕ್ತರು ಸಹ ದೇವಸ್ಥಾನದ ಕಡೆಗೆ ಮುಖ ಮಾಡಲಿಲ್ಲ. ಇದರಿಂದಾಗಿ ದೇಗುಲ ಭಕ್ತರಿಲ್ಲದೆ ಬಿಕೋ ಎನ್ನುತ್ತಿತ್ತು.

‘ಬುಧವಾರ (ಜು.17) ಬೆಳಿಗ್ಗೆ 5.30ಕ್ಕೆ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಾರ್ವಜನಿಕರ ದರ್ಶನಕ್ಕೆ ಮುಕ್ತಗೊಳಿಸಲಾಗುವುದು’ ಎಂದು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ರಾವ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.