ADVERTISEMENT

ಐದು ಸಾವಿರ ಜನರಿಗೆ ಉದ್ಯೋಗ: ಸಚಿವ ಎಸ್‌.ಟಿ. ಸೋಮಶೇಖರ್‌ ಭರವಸೆ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 19:41 IST
Last Updated 19 ನವೆಂಬರ್ 2020, 19:41 IST

ಹೊಸಪೇಟೆ: ‘ಸಹಕಾರ ಇಲಾಖೆಯಿಂದ ಮುಂಬರುವ ಆರು ತಿಂಗಳಲ್ಲಿ ಐದು ಸಾವಿರ ಜನರಿಗೆ ಉದ್ಯೋಗ ಕೊಡಲಾಗುವುದು’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಭರವಸೆ ನೀಡಿದರು.

ಬಳ್ಳಾರಿ ಜಿಲ್ಲಾ ಸಹಕಾರ ಯೂನಿಯನ್‌ನಿಂದ ಗುರುವಾರ ನಗರದಲ್ಲಿ ಹಮ್ಮಿಕೊಂಡಿದ್ದ 67ನೇ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, ‘ಕೋವಿಡ್‌ ಲಾಕ್‌ಡೌನ್‌ನಿಂದ ಅನೇಕರು ಉದ್ಯೋಗ ಕಳೆದುಕೊಂಡುಸಂಕಷ್ಟದಲ್ಲಿದ್ದಾರೆ. ಅಂತಹವರಿಗೆ ಕರ್ನಾಟಕ ಹಾಲು ಮಹಾಮಂಡಳ, ಡಿಸಿಸಿ ಬ್ಯಾಂಕ್‌, ಸಹಕಾರ ಸಂಸ್ಥೆಗಳ ಮೂಲಕ ಉದ್ಯೋಗ ನೀಡಲಾಗುವುದು. ಬರುವ ಮೇ ಒಳಗೆ ಇಡೀ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT