ಕಂಪ್ಲಿ: ಕಾಂಗ್ರೆಸ್ ಪಕ್ಷ ಘೋಷಿಸಿರುವ ಎಲ್ಲ ಗ್ಯಾರಂಟಿಗಳನ್ನು ಯಾವುದೇ ಷರತ್ತು ಇಲ್ಲದೆ ಜಾರಿಗೊಳಿಸಬೇಕು ಎಂದು ಜೆಡಿಎಸ್ ಮುಖಂಡ ರಾಜುನಾಯಕ ಒತ್ತಾಯಿಸಿದರು.
ಇಲ್ಲಿ ಶನಿವಾರ ನಡೆದ ಜೆಡಿಎಸ್ ಮುಖಂಡರ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಗ್ಯಾರಂಟಿಗಳನ್ನು ನಂಬಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದು, ಜಾರಿಗೊಳಿಸಲು ವಿಳಂಬ ಮಾಡಿದಲ್ಲಿ ಪಕ್ಷದಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಬೂತ್ ಮಟ್ಟದಿಂದ ತಯಾರಿ ನಡೆಸಲಾಗುವುದು. ಅದಕ್ಕಾಗಿ ಪಕ್ಷದ ಕಾರ್ಯಕರ್ತರು ಸಿದ್ಧರಾಗಬೇಕು. ಮುಂದಿನ ದಿನಗಳಲ್ಲಿ ಕಂಪ್ಲಿ ಕ್ಷೇತ್ರದ ಮೂಲ ಸೌಕರ್ಯ ಕುರಿತು ಹೋರಾಟ ಹಮ್ಮಿಕೊಳ್ಳುವುದಾಗಿ ತಿಳಿಸಿದರು.
ಕಂಪ್ಲಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಗದೀಶ್ ಪೂಜಾರ್, ಯುವ ಘಟಕ ಅಧ್ಯಕ್ಷ ಜಾಲಿಬೆಂಚಿ ಹೊನ್ನೂರಸ್ವಾಮಿ, ಮುಖಂಡರಾದ ಬಸವರಾಜಸ್ವಾಮಿ ಕೊರ್ಲಗುಂದಿ, ದೇವರಾಜ್, ಇರ್ಫಾನ್, ಶಿವಣ್ಣ, ರಾಮಚಂದ್ರ, ಜೀರು ಶಿವಪ್ಪ, ಕುಬೇರ, ಟಿ. ಮೋಹನ, ಹನುಮೇಶನಾಯಕ, ಉಮೇಶ ಇತರರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.