ADVERTISEMENT

ಹೊಸಪೇಟೆ: ಬೈಸಿಕಲ್‌ನಲ್ಲಿ ಅಪ್ಪು ಸಮಾಧಿ ಸ್ಥಳಕ್ಕೆ ತೆರಳಿ ಗೌರವ ಸಮರ್ಪಣೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 12:32 IST
Last Updated 21 ಡಿಸೆಂಬರ್ 2021, 12:32 IST
ಬೆಳಗೋಡ್‌ ಉಮೇಶ್‌ ಅವರು ಮಂಗಳವಾರ ಬೆಂಗಳೂರಿಗೆ ಬೈಸಿಕಲ್‌ನಲ್ಲಿ ಪಯಣ ಬೆಳೆಸುವುದಕ್ಕೂ ಮುನ್ನ ಹೊಸಪೇಟೆಯಲ್ಲಿ ಯುವಕರು ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು
ಬೆಳಗೋಡ್‌ ಉಮೇಶ್‌ ಅವರು ಮಂಗಳವಾರ ಬೆಂಗಳೂರಿಗೆ ಬೈಸಿಕಲ್‌ನಲ್ಲಿ ಪಯಣ ಬೆಳೆಸುವುದಕ್ಕೂ ಮುನ್ನ ಹೊಸಪೇಟೆಯಲ್ಲಿ ಯುವಕರು ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿದರು   

ಹೊಸಪೇಟೆ (ವಿಜಯನಗರ): ನಟ ದಿವಂಗತ ಪುನೀತ್ ರಾಜಕುಮಾರ್ ಸಮಾಧಿಗೆ ತೆರಳಿ ಗೌರವ ಸಲ್ಲಿಸಲು ನಗರದ ಯುವಕನೊಬ್ಬ ಮಂಗಳವಾರ ಬೈಸಿಕಲ್‌ ಮೇಲೆ ಬೆಂಗಳೂರಿಗೆ ಪಯಣ ಬೆಳೆಸಿದ.

ನಗರದ ತಳವಾರಕೇರಿ ನಿವಾಸಿ ಬೆಳಗೋಡ್ ಉಮೇಶ್, ಪುನೀತ್‌ ರಾಜಕುಮಾರ್‌ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ ಬೈಸಿಕಲ್‌ ಮೇಲೆ ಪ್ರಯಾಣ ಬೆಳೆಸಿದರು. ಉಮೇಶ್‌ ಅವರನ್ನು ಬೀಳ್ಕೊಡಲು ಅನೇಕ ಯುವಕರು ಸೇರಿದ್ದರು.

‘ಪುನೀತ್ ರಾಜಕುಮಾರ್ ಹೊಸಪೇಟೆಗೆ ಬಂದಾಗ ಭೇಟಿಯಾಗಲು ಆಗಿರಲಿಲ್ಲ. ಅವರ ನಿಧನದ ಸಮಯದಲ್ಲೂ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಿರಲಿಲ್ಲ. ಬೈಸಿಕಲ್‌ನಲ್ಲಿ ಅವರ ಸಮಾಧಿ ಸ್ಥಳಕ್ಕೆ ಹೋಗಿ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ನೇತ್ರದಾನಕ್ಕೆ ಹೆಸರು ನೋಂದಣಿ ಮಾಡಿಸುತ್ತೇನೆ’ ಉಮೇಶ್‌ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.