ADVERTISEMENT

ಅಸಮರ್ಪಕ ವಿದ್ಯುತ್ ಪೂರೈಕೆ : ರೈತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2023, 16:05 IST
Last Updated 24 ಆಗಸ್ಟ್ 2023, 16:05 IST
ಕೊಟ್ಟೂರಿನ ಜೆಸ್ಕಾಂ ಕಚೇರಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಗುರುವಾರ ಜೆಸ್ಕಾಂ ಅಧಿಕಾರಿಗೆ ಮನವಿ ಸಲ್ಲಿಸಿದರು
ಕೊಟ್ಟೂರಿನ ಜೆಸ್ಕಾಂ ಕಚೇರಿಯಲ್ಲಿ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಗುರುವಾರ ಜೆಸ್ಕಾಂ ಅಧಿಕಾರಿಗೆ ಮನವಿ ಸಲ್ಲಿಸಿದರು   

ಕೊಟ್ಟೂರು: ಅಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಕಡಿಮೆ ವೋಲ್ಟೇಜ್ ನಿಂದ ಪಂಪ್ ಸೆಟ್‌ಗಳು ಚಾಲನೆಗೊಳ್ಳದೆ ರೈತರು ಪರದಾಡುವಂತಹ ಪರಿಸ್ಥಿತಿ ತಾಲ್ಲೂಕಿನಾದ್ಯಂತ ನಿರ್ಮಾಣವಾಗಿದೆ ಎಂದು ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎನ್.ಭರಮಣ್ಣ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಜೆಸ್ಕಾಂ ಕಚೇರಿಯಲ್ಲಿ ವಿದ್ಯುತ್ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಜೆಸ್ಕಾಂ ಇಲಾಖೆಯ ಕೂಡ್ಲಿಗಿ ಉಪವಿಭಾಗದ ಎಇಇ ಪ್ರಕಾಶ್ ಪತ್ತೇನೂರ್ ಇವರಿಗೆ ಗುರುವಾರ ಮನವಿ ಸಲ್ಲಿಸಿ ಮಾತನಾಡಿದರು.

ಕಳೆದ 20 ದಿನಗಳಿಂದ ಮಳೆಯಾಗದ ಕಾರಣ ಬೆಳೆಗಳು ಒಣಗುತ್ತಿವೆ ಹಾಗಾಗಿ ಕೊಳವೆ ಬಾವಿಗಳ ಸೌಲಭ್ಯ ಹೊಂದಿರುವ ರೈತರು ನೀರು ಹಾಯಿಸಲು ಮುಂದಾದರೆ ವಿದ್ಯುತ್ ಕಡಿತ ಹಾಗೂ ಕಡಿಮೆ ವೋಲ್ಟೇಜ್ ಪೂರೈಕೆಯಿಂದ ರೈತರು ರೋಸಿ ಹೋಗಿದ್ದಾರೆ ಎಂದರು.

ADVERTISEMENT

ಇಲಾಖಾಧಿಕಾರಿಗಳು ಗಮನ ಹರಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಪ್ರತಿಭಟನೆಗೆ ಇಳಿಯುವುದಾಗಿ ಎಚ್ಚರಿಸಿದರು.

ಎಇಇ ಪ್ರಕಾಶ್ ಪತ್ತೇನೂರ್ ಮನವಿ ಸ್ವೀಕರಿಸಿ ಮಾತನಾಡಿ, ಕೂಡಲೇ ಅಗತ್ಯ ವೋಲ್ಟೇಜ್ ಹಾಗೂ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ರೈತ ಸಂಘದ ಪದಾಧಿಕಾರಿಗಳಾದ ಕೆ.ಎಸ್.ಜಯಪ್ರಕಾಶ್ ನಾಯ್ಕ, ಜಂಬೂರು ಮರುಳಸಿದ್ಧಪ್ಪ, ಶ್ರೀಧರ್ ಒಡೆಯರ್, ಚಪ್ಪರದಹಳ್ಳಿ ಕೊಟ್ರೇಶಪ್ಪ, ಅಯ್ಯನಹಳ್ಳಿ ಭಾಗ್ಯಪ್ಪ, ರಮೇಶ ನಾಯ್ಕ, ಬಸವರಾಜಪ್ಪ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.