ADVERTISEMENT

ನಾಲ್ಕು ಮರಳು ಲಾರಿ ವಶ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2020, 2:43 IST
Last Updated 12 ಸೆಪ್ಟೆಂಬರ್ 2020, 2:43 IST
ಹೂವಿನಹಡಗಲಿಯಲ್ಲಿ ಉಪ ವಿಭಾಗಾಧಿಕಾರಿ ವಶಪಡಿಸಿಕೊಂಡ ಮರಳು ಸಾಗಣೆ ಲಾರಿಗಳು
ಹೂವಿನಹಡಗಲಿಯಲ್ಲಿ ಉಪ ವಿಭಾಗಾಧಿಕಾರಿ ವಶಪಡಿಸಿಕೊಂಡ ಮರಳು ಸಾಗಣೆ ಲಾರಿಗಳು   

ಕೂಡ್ಲಿಗಿ: ತಾಲ್ಲೂಕಿನಲ್ಲಿ ರೈತರ ಬೆಳೆ ಸಮೀಕ್ಷೆಯ ಪ್ರಗತಿ ಕುಂಠಿತವಾಗಿದ್ದು, ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ತಹಶೀಲ್ದಾರ್ ಎಸ್.ಮಹಾಬಲೇಶ್ವರ ಸೂಚನೆ ನೀಡಿದರು.

ತಾಲ್ಲೂಕು ಕಚೇರಿಯಲ್ಲಿ ಶುಕ್ರವಾರ ಬೆಳೆ ಸಮಿಕ್ಷೆ ಆ್ಯಪ್ ಕುರಿತು ನಡೆದ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿ, ನಿಗದಿತ ಸಮಯದಲ್ಲಿ ಮಾಡಿಸ ದಿದ್ದಲ್ಲಿ ರೈತರು ಸರ್ಕಾರದಿಂದ ದೊರೆಯುವ ಸೌಲಭ್ಯಗಳಿಂದ ವಂಚಿತರಾಗಬೇಕಾಗುತ್ತದೆ. ಸಮೀಕ್ಷೆದಾರರು ರೈತರ ಜಮೀನು ಗಳಿಗೆ ಬೆಳೆ ಸಮೀಕ್ಷೆ ಮಾಡಿಸಬೇಕು. ಇದಕ್ಕೆ ಗ್ರಾಮ ಲೆಕ್ಕಾಧಿಕಾರಿಗಳು ಸಹಕಾರ ನೀಡಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಎನ್.ವಿ.ಪ್ರಕಾಶ್, ಕೃಷಿ ಇಲಾಖೆಯ ಗುರುಬಸವರಾಜ ಚಿಲಗೋಡು, ಎಚ್.ಶ್ರವಣಕುಮಾರ್, ಷಣ್ಮುಖ ನಾಯ್ಕ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.