ADVERTISEMENT

ಶ್ರೀಶೈಲ, ಕಾಶಿ ಪೀಠದ ಸ್ವಾಮೀಜಿಗೆ ಜನಾರ್ದನ ರೆಡ್ಡಿ ಪಾದ ಪೂಜೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 8:36 IST
Last Updated 20 ಜೂನ್ 2019, 8:36 IST
   

ಬಳ್ಳಾರಿ: ಕಾಶಿ ಪೀಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿಗೆ ನಗರದ ತಮ್ಮ ಮನೆಯಲ್ಲಿ ಜಿ.ಜನಾರ್ದನ ರೆಡ್ಡಿ ಗುರುವಾರ ಪಾದಪೂಜೆ ಮಾಡಿದರು.

‘ರೆಡ್ಡಿಯವರು ಕಾಶಿ ಪೀಠದಲ್ಲಿ ಲಿಂಗಧಾರಣೆ ಮಾಡಿಕೊಂಡಿದ್ದರು, ಅಂದಿನಿಂದ ನಿಷ್ಠೆ ಭಕ್ತಿಯಿಂದ ಲಿಂಗ ಪೂಜೆ ಮಾಡುತ್ತಿದ್ದಾರೆ. ಎಲ್ಲ ಸಮಸ್ಯೆಗಳಿಂದ ಮುಕ್ತಿ‌ ಹೊಂದಲಿದ್ದಾರೆ’ ಎಂದು ಶಿವಾಚಾರ್ಯ ಸ್ವಾಮೀಜಿ ಸುದ್ದಿಗಾರರಿಗೆ ತಿಳಿಸಿದರು.

‘ಸ್ವಾಮೀಜಿ ಮಾತಿನಂತೆ ನಾನು ಎಲ್ಲ ಆರೋಪಗಳಿಂದ ಶೀಘ್ರ ಮುಕ್ತವಾಗುವೆ’ ಎಂದು ರೆಡ್ಡಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.