ADVERTISEMENT

ಬಳ್ಳಾರಿ | ಗಣೇಶ ಹಬ್ಬ: ಖರೀದಿ ಜೋರು

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2024, 15:47 IST
Last Updated 6 ಸೆಪ್ಟೆಂಬರ್ 2024, 15:47 IST
ಬಳ್ಳಾರಿ ನಗರದ ಹಳೇ ಬೆಂಗಳೂರು ರಸ್ತೆಯಲ್ಲಿ ಬಾಳೆ ಕಂದು ಖರೀದಿಸುತ್ತಿದ್ದ ಜನ 
ಬಳ್ಳಾರಿ ನಗರದ ಹಳೇ ಬೆಂಗಳೂರು ರಸ್ತೆಯಲ್ಲಿ ಬಾಳೆ ಕಂದು ಖರೀದಿಸುತ್ತಿದ್ದ ಜನ    

ಬಳ್ಳಾರಿ: ಗೌರಿ ಗಣೇಶ ಹಬ್ಬವನ್ನು ಸಂಭ್ರಮ– ಸಡಗರದಿಂದ ಆಚರಿಸಲು ಬಳ್ಳಾರಿ ಜಿಲ್ಲೆಯ ನಗರದ ಜನತೆ ಸಜ್ಜಾಗುತ್ತಿದ್ದು, ಹಬ್ಬಕ್ಕೆ ಬೇಕಾಗಿರುವ ವಿಗ್ರಹ, ಹೂವು, ಹಣ್ಣು, ಪೂಜಾ ಸಾಮಗ್ರಿಗಳು, ಅಗತ್ಯ ವಸ್ತುಗಳ ಖರೀದಿ ಭರಾಟೆ ಶುಕ್ರವಾರ ಜೋರಾಗಿ ನಡೆಯಿತು. 

ನಗರದ ಎಪಿಎಂಸಿ ಮಾರುಕಟ್ಟೆ, ಬೆಂಗಳೂರು ರಸ್ತೆ , ಕನಕ ದುರ್ಗಮ್ಮ ದೇವಸ್ಥಾನ ಬಳಿ, ಹೂವಿನ ಮಾರುಕಟ್ಟೆ, ಕೌಲ್ ಬಜಾರ್‌, ಗಾಂಧಿನಗರ ಮಾರುಕಟ್ಟೆಯಲ್ಲಿ ಜನ ಪೂಜಾ ಸಾಮಗ್ರಿಗಳ ಖರೀದಿಯಲ್ಲಿ ಮಗ್ನರಾಗಿದ್ದರು. 

ಹಣ್ಣು- ತರಕಾರಿ‌, ಹೂ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದರೂ ಗ್ರಾಹಕರು ಖರೀದಿಗೆ ಮುಗಿ ಬಿದ್ದಿದ್ದಾರೆ. ಕನಕಾಂಬರ, ಮಲ್ಲಿಗೆ, ಕಾಕಡ, ಸೇವಂತಿಗೆ ಮತ್ತು ಚೆಂಡು ಹೂ ದರ ತುಸು ಹೆಚ್ಚಾಗಿದೆ. ಮತ್ತೊಂದೆಡೆ, ಜನರು ಪರಿಸರ ಸ್ನೇಹಿ ಗಣಪತಿ ಖರೀದಿಗೆ ಒಲವು ತೋರಿಸುತ್ತಿದ್ದಾರೆ.

ADVERTISEMENT

ಹೂ -ಹಣ್ಣು, ತರಕಾರಿ ಬೆಲೆ ಹೆಚ್ಚಾಗಿದೆ. ಹಬ್ಬ ಮಾಡಬೇಕು ಎಂದು ಬೆಲೆ ಹೆಚ್ಚಿದ್ದರೂ ಅಗತ್ಯ ವಸ್ತುಗಳನ್ನು ಕಡಿಮೆ ಪ್ರಮಾಣದಲ್ಲಿ ಖರೀದಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಬಾರಿ ಮಣ್ಣಿನಿಂದ ಮಾಡಿರುವ ಗಣಪತಿಮೂರ್ತಿಗಳನ್ನು ಮಾತ್ರ ಮಾರಾಟ ಮಾಡುತ್ತಿದ್ದೇವೆ. ಪಿಒಪಿ ಗಣೇಶಮೂರ್ತಿಗಳನ್ನು ನಾವು ಮಾರಾಟ ಮಾಡುವುದಿಲ್ಲ. ₹50ನಿಂದ ಒಂದು ಸಾವಿರದ ವರೆಗೆ ಗಣೇಶಮೂರ್ತಿಗಳನ್ನು ಮಾರಾಟ ಮಾಡುತ್ತಿದ್ದೇವೆ’ ಎಂದು
ಗಣೇಶಮೂರ್ತಿ ವ್ಯಾಪಾರಿಗಳು ತಿಳಿಸಿದರು.

ಬಳ್ಳಾರಿ ನಗರದ ಸಣ್ಣ ಮಾರುಕಟ್ಟೆಯಲ್ಲಿ ಹಣ್ಣು ಖರೀದಿಸುತ್ತಿದ್ದ ಜನ  
ನಗರದ ಬೆಂಗಳೂರು ರಸ್ತೆಯಲ್ಲಿ ಶುಕ್ರವಾರ ಗಣೇಶನ ಮೂರ್ತಿ ಖರೀದಿಯಲ್ಲಿ ತೊಡಗಿದ್ದ ಜನ  
ನಗರದ ಹೂವಿನ ಮಾರುಕಟ್ಟೆಯಲ್ಲಿ ಶುಕ್ರವಾರ ಜನ ಹಬ್ಬಕ್ಕಾಗಿ ಹೂ ಖರೀದಿ ಮಾಡಿದರು.  
ನಗರದ ಹೂವಿನ ಮಾರುಕಟ್ಟೆಯಲ್ಲಿ ಶುಕ್ರವಾರ ಜನ ಹಬ್ಬಕ್ಕಾಗಿ ಹೂ ಖರೀದಿ ಮಾಡಿದರು.  
ಬೆಂಗಳೂರು ರಸ್ತೆಯ ಮಳಿಗೆಯೊಂದರಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾರಾಟಕ್ಕೆ ಇರಿಸಲಾಗಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.