ಸಿರುಗುಪ್ಪ: ತಾಲ್ಲೂಕಿನ ದೇಶನೂರು ಗ್ರಾಮದಲ್ಲಿ ಅಪ್ರಾಪ್ತೆ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರು ಜನರ ಪೈಕಿ ಐವರನ್ನು ಪೊಲೀಸರು ಮಂಗಳವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಆಟೊ ಚಾಲಕ ಅಂಜಿ, ಮಲ್ಲೇಶ, ಹನುಮೇಶಿ, ರಾಜು ಮತ್ತು ರಾಘವೇಂದ್ರ ಕೃತ್ಯ ಎಸಗಿದವರು.
‘ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದ ಅವರು, ಸೆ. 10ರಿಂದ ಡಿ. 20ರ ವರೆಗೆ ಸತತವಾಗಿ ಅತ್ಯಾಚಾರ ನಡೆಸಿದ್ದಾರೆ. ಇದರಿಂದ ಬಾಲಕಿ ಗರ್ಭವತಿಯಾಗಿದ್ದು, ಈ ವಿಷಯ ತಿಳಿದು ಸಾಮಾಜಿಕ ಕಾರ್ಯಕರ್ತೆ ಅದೋನಿಯ ಲಕ್ಷ್ಮಿ, ಬಾಲಕಿಯ ತಂದೆಗೆ ತಿಳಿಸಿದ್ದಾರೆ. ಡಿ. 23ರಂದು ಅವರು ಠಾಣೆಗೆ ದೂರು ಕೊಟ್ಟಿದ್ದರು. ದೂರಿನ ಮೇರೆಗೆ ಐವರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೊಬ್ಬನ ಪತ್ತೆ ಕಾರ್ಯ ನಡೆದಿದೆ. ಬಾಲಕಿಯನ್ನು ಬಳ್ಳಾರಿಯ ವಿಮ್ಸ್ಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಇನ್ಸ್ಪೆಕ್ಟರ್ ಗಂಗಪ್ಪ ಬುಲ್ಲರ್ ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.