ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ ಘೋರ್ಪಡೆ ಪ್ರಚಾರ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 16:17 IST
Last Updated 20 ನವೆಂಬರ್ 2019, 16:17 IST
ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಾವ ಘೋರ್ಪಡೆ ಅವರು ಮಂಗಳವಾರ ಮಾಜಿ ನಗರಸಭೆ ಸದಸ್ಯ ಗುಡಿಗಂಟಿ ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದರು
ಕಾಂಗ್ರೆಸ್‌ ಅಭ್ಯರ್ಥಿ ವೆಂಕಟರಾವ ಘೋರ್ಪಡೆ ಅವರು ಮಂಗಳವಾರ ಮಾಜಿ ನಗರಸಭೆ ಸದಸ್ಯ ಗುಡಿಗಂಟಿ ಮಲ್ಲಿಕಾರ್ಜುನ ಅವರನ್ನು ಭೇಟಿ ಮಾಡಿದರು   

ಹೊಸಪೇಟೆ: ವಿಜಯನಗರ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ವೆಂಕಟರಾವ ಘೋರ್ಪಡೆಯವರು ಮಂಗಳವಾರ ಕ್ಷೇತ್ರದಲ್ಲಿ ಪ್ರಚಾರ ಕೈಗೊಂಡರು.

ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿದ್ದು, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ.

ಮಾಜಿ ನಗರಸಭೆ ಸದಸ್ಯರಾದಎಮ್ಮಿ ತಿಮ್ಮಪ್ಪ, ಗೌಸ್, ಗುಡಿಗಂಟಿ ಮಲ್ಲಿಕಾರ್ಜುನ, ಮಲ್ಲಪ್ಪ, ರೌಫ್‌ ಅವರನ್ನು ಭೇಟಿಯಾಗಿ ಬೆಂಬಲ ಕೋರಿದರು. ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಮನವಿ ಮಾಡಿದರು.

ADVERTISEMENT

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಇಮಾಮ್ ನಿಯಾಜಿ, ಕಮಲಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಸೋಮಪ್ಪ, ಮುಖಂಡರಾದ ರಘು ಗುಜ್ಜಲ್, ಗುಜ್ಜಲ್ ನಾಗರಾಜ್, ಕೆ. ವೆಂಕಟೇಶ್, ಮೇಟಿ ಬಸವರಾಜ, ಬಾಣದ ಗಣೇಶ್, ವೀರಯ್ಯ ಸ್ವಾಮಿ, ತೇಜಸ್ವಿ ನಾಯ್ಕ, ಸತ್ಯನಾರಾಯಣ, ತಮ್ಮನ್ನಳ್ಳೆಪ್ಪ, ಜಫ್ರುಲ್ಲಾ ಖಾನ್, ನಾಗರಾಜ್, ರೆಹಮಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.