ADVERTISEMENT

ಕಂಪ್ಲಿ: ಬೆಳ್ಳಿ, ಬಂಗಾರ ಕಳ್ಳತನ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2025, 5:32 IST
Last Updated 1 ಆಗಸ್ಟ್ 2025, 5:32 IST
ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹಣ, ಚಿನ್ನ ದರೋಡೆ
ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹಣ, ಚಿನ್ನ ದರೋಡೆ    

ಕಂಪ್ಲಿ: ಪಟ್ಟಣದ 2ನೇ ವಾರ್ಡ್ ಆದೋನಿ ಮಸೀದಿ ಬಳಿ ಬುಧವಾರ ರಾತ್ರಿ ಜಿ. ಇಷಾಕ್ ಅವರ ಮನೆ ಬಾಗಿಲ ಚಿಲಕದ ಕೊಕ್ಕೆ (ಬಕ್ಕಲ್) ಮುರಿದ ಕಳ್ಳರು ಮನೆಯಲ್ಲಿದ್ದ ಎರಡೂವರೆ ತೊಲ ಬಂಗಾರ, 30ತೊಲ ಬೆಳ್ಳಿ ಕಳ್ಳತನ ಮಾಡಿದ್ದಾರೆ.

ಮನೆಯವರು ಚಿಕಿತ್ಸೆಗೆಂದು ಬೆಂಗಳೂರಿಗೆ ತೆರಳಿದಾಗ ಈ ಘಟನೆ ನಡೆದಿದೆ. ಈ ಕುರಿತು ಇಲ್ಲಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT