ADVERTISEMENT

ಬಳ್ಳಾರಿ‌‌‌| ಸರ್ಕಾರಿ ನೌಕರರ ಮುಷ್ಕರ: ಚಿಕಿತ್ಸೆಗಾಗಿ ರೋಗಿಗಳ ಪರದಾಟ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2023, 6:34 IST
Last Updated 1 ಮಾರ್ಚ್ 2023, 6:34 IST
ಬಳ್ಳಾರಿ ಜಿಲ್ಲಾ ಆಸ್ಪತ್ರೆ
ಬಳ್ಳಾರಿ ಜಿಲ್ಲಾ ಆಸ್ಪತ್ರೆ   

ಬಳ್ಳಾರಿ: ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆ ಇಂದು ಓಪಿಡಿ ಬಂದ್ ಆಗಿದ್ದು, ರೋಗಿಗಳು ಜಿಲ್ಲಾ ಆಸ್ಪತ್ರೆಗೆ ಬಂದು ಚಿಕಿತ್ಸೆ ಸಿಗದೆ ಮರಳಿ ಹೋಗುತ್ತಿರುವ ದೃಶ್ಯ ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಕಂಡುಬಂದಿದೆ.

ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದ ರೋಗಿಗಳು ಓಪಿಡಿ ಬಂದ್‌ ಕಾರಣದಿಂದಾಗಿ ಪರದಾಡುವ ಪರಿಸ್ಥಿತಿ ಉಂಟಾಗಿದೆ.

ಸ್ಕ್ಯಾನಿಂಗ್ ಮಾಡಿಸಲು ಬಂದಿದ್ದ ಗರ್ಭಿಣಿ ವಾಪಸ್ ತೆರಳಿದರು.

ADVERTISEMENT

ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದರೂ ಜಿಲ್ಲಾಸ್ಪತ್ರೆಯ ವೈದ್ಯರು ಮಾತ್ರ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಇಂದು ಮತ್ತು ನಾಳೆ ಎರಡು ದಿನ ಓಪಿಡಿ ಬಂದ್ ಇರುವುದರಿಂದ ಯಾವುದೇ ಚಿಕಿತ್ಸೆ ನೀಡುವುದಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ರೋಗಿಗಳಿಗೆ ಹೇಳಿ‌ಕಳಿಸುತ್ತಿದ್ದಾರೆ.

ಆಂಧ್ರಪ್ರದೇಶ ಸೇರಿದಂತೆ ಜಿಲ್ಲಾ ನಾನಾ ಭಾಗದಿಂದ ರೋಗಿಗಳು ಬಂದಿದ್ದು, ಚಿಕಿತ್ಸೆ ಸಿಗದೆ ಆಸ್ಪತ್ರೆಯ ಮುಂಭಾಗದಲ್ಲಿ ಕಾದು ಕುಳಿತ್ತಿದ್ದರು. ರೋಗಿಗಳನ್ನು ಸಿಬ್ಬಂದಿ ವಾಪಸ್ ಕಳಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.