ADVERTISEMENT

ಬಳ್ಳಾರಿ | ಜಿಎಸ್‌ಟಿ ಪರಿಷ್ಕರಣೆ: ಬಿಜೆಪಿ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2025, 4:07 IST
Last Updated 23 ಸೆಪ್ಟೆಂಬರ್ 2025, 4:07 IST
ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ ಪರಿಷ್ಕೃತ ಜಿಎಸ್‌ಟಿ ಜಾರಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಿದರು. 
ಸರಕು ಮತ್ತು ಸೇವೆಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿದ ಪರಿಷ್ಕೃತ ಜಿಎಸ್‌ಟಿ ಜಾರಿಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಬಳ್ಳಾರಿ ನಗರದಲ್ಲಿ ಸೋಮವಾರ ಸಂಭ್ರಮಾಚರಣೆ ಮಾಡಿದರು.    

ಬಳ್ಳಾರಿ: ವಿವಿಧ ಉತ್ಪನ್ನಗಳು ಹಾಗೂ ಸೇವೆಗಳ ಮೇಲಿನ ತೆರಿಗೆ (ಜಿಎಸ್‌ಟಿ) ಪ್ರಮಾಣವನ್ನು ಕಡಿತಗೊಳಿಸಿರುವ ಪ‍ರಿಷ್ಕೃತ ಜಿಎಸ್‌ಟಿ ಸೋಮವಾರದಿಂದ ಜಾರಿಯಾಗಿದ್ದು, ಬಿಜೆಪಿಯು ನಗರದಲ್ಲಿ ಸಂಭ್ರಮಾಚರಣೆ ನಡೆಸಿತು. 

ನಗರದ ಬ್ರೂಸ್‌ಪೇಟೆ ವೃತ್ತದಲ್ಲಿ ಸೇರಿದ ಬಿಜೆಪಿ ಕಾರ್ಯಕರ್ತರು. ಕೇಂದ್ರ ಸರ್ಕಾರದ ಪರ ಘೋಷಣೆ ಕೂಗಿದರು. 

ಈ ವೇಳೆ ಮಾತನಾಡಿದ ಮಾಜಿ ಶಾಸಕ ಸೋಮಶೇಖರ ರೆಡ್ಡಿ, ‘ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆ ಮಾಡಿದೆ. ಈ ಮೂಲಕ ಸಾಮಾನ್ಯ ಜನರ ನೆರವಿಗೆ ಸರ್ಕಾರ ಧಾವಿಸಿದೆ. ಇದರಿಂದ ವ್ಯಾಪಾರಸ್ಥರಿಗೂ ಅನುಕೂಲವಾಗಿದೆ’ ಎಂದು ಹೇಳಿದರು. 

ADVERTISEMENT

ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್‌ ಕುಮಾರ್‌, ಬಿಜೆಪಿ ಪ್ರಧಾನ ಕಾರ್ಯದರ್ಶಿ ದಿವಾಕರ್‌, ಮಹಿಪಾಲ್‌ ಇದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.