ADVERTISEMENT

ಹಂಪಿ ರುದ್ರಭೂಮಿಯಲ್ಲಿ ಕೋವಿಡ್‌ ಮೃತರ ಶವ ಹೂಳದಂತೆ ಗ್ರಾಮಸ್ಥರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 28 ಮೇ 2021, 12:18 IST
Last Updated 28 ಮೇ 2021, 12:18 IST
ಹಂಪಿ ಗ್ರಾಮಸ್ಥರು ಶುಕ್ರವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಹಂಪಿ ಗ್ರಾಮಸ್ಥರು ಶುಕ್ರವಾರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಹೊಸಪೇಟೆ (ವಿಜಯನಗರ): ‘ಕೋವಿಡ್‌–19ನಿಂದ ಮೃತಪಟ್ಟವರ ಶವಗಳನ್ನು ತಾಲ್ಲೂಕಿನ ಹಂಪಿ ರುದ್ರಭೂಮಿಯಲ್ಲಿ ಹೂಳಲು ಅವಕಾಶ ಕಲ್ಪಿಸಬಾರದು’ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸಂಬಂಧ ಶುಕ್ರವಾರ ಹಂಪಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

‘ಒಂದುವೇಳೆ ಕೋವಿಡ್‌ನಿಂದ ನಿಧನ ಹೊಂದಿದವರ ಅಂತ್ಯಸಂಸ್ಕಾರ ಹಂಪಿಯಲ್ಲೇ ಮಾಡುವುದೇ ಆದರೆ ಶವಗಳನ್ನು ಸುಡಬೇಕು. ಆದರೆ, ಯಾವುದೇ ಕಾರಣಕ್ಕೂ ಹೂಳಬಾರದು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಗ್ರಾಮಸ್ಥರಾದ ಸಂದೇಶ, ಸುರೇಶ, ಸಿದ್ದಪ್ಪ, ರಮೇಶ, ರಾಜೇಶ, ಪರಶುರಾಮ ಮೊದಲಾದವರು ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.