ADVERTISEMENT

ಹಂಪಿ ಸ್ಮಾರಕಕ್ಕೆ ಹಾನಿ; ಒಬ್ಬ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 15:17 IST
Last Updated 18 ಸೆಪ್ಟೆಂಬರ್ 2019, 15:17 IST
ಹಂಪಿಯಲ್ಲಿ ಸಾಲು ಕಂಬ ಉರುಳಿಸಿದ ಸ್ಥಳವನ್ನು ಪೊಲೀಸ್‌ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿದರು
ಹಂಪಿಯಲ್ಲಿ ಸಾಲು ಕಂಬ ಉರುಳಿಸಿದ ಸ್ಥಳವನ್ನು ಪೊಲೀಸ್‌ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿದರು   

ಹೊಸಪೇಟೆ: ತಾಲ್ಲೂಕಿನ ಹಂಪಿ ವಿಜಯ ವಿಠಲ ದೇವಸ್ಥಾನ ಹಿಂಭಾಗದ ಸಾಲುಗಂಬ ಕೆಡವಿ ಹಾನಿಗೊಳಿಸಿದ ಬೆಂಗಳೂರಿನ ನಾಗರಾಜ (45) ಎಂಬುವರನ್ನು ಪೊಲೀಸರು ಬುಧವಾರ ಸಂಜೆ ವಶಕ್ಕೆ ತೆಗೆದುಕೊಂಡಿದ್ದಾರೆ.

‘ನಾಗರಾಜ ಬೆಂಗಳೂರಿನಿಂದಹಂಪಿ ನೋಡಲು ಬಂದಿದ್ದರು. ಬುಧವಾರ ಹಂಪಿಯಲ್ಲಿ ಸುತ್ತಾಡುವಾಗ ಸಾಲುಗಂಬವೊಂದನ್ನು ತಳ್ಳಿ ಹಾನಿ ಮಾಡಿದ್ದಾರೆ. ಈ ಕುರಿತು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿಗಳು ಠಾಣೆಗೆ ದೂರು ಕೊಟ್ಟಿದ್ದರಿಂದ ನಾಗರಾಜ ಅವನನ್ನು ವಶಕ್ಕೆ ಪಡೆಯಲಾಗಿದೆ. ಸ್ಮಾರಕಗಳ ಮಹತ್ವ ಗೊತ್ತಿಲ್ಲದೆ ನಾಗರಾಜ ಈ ಕೃತ್ಯ ಎಸಗಿರುವುದು ಗೊತ್ತಾಗಿದೆ’ ಎಂದು ಹಂಪಿ ಡಿ.ವೈ.ಎಸ್ಪಿ. ಸಿಮಿ ಮರಿಯಮ್‌ ಜಾರ್ಜ್‌ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಹಂಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರಾತತ್ವ ಇಲಾಖೆ ಹಾಗೂ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.