ಹೊಸಪೇಟೆ: ಹಂಪಿಯ ಸಂರಕ್ಷಿತ ಸ್ಮಾರಕದೊಳಗೆ ನಿಯಮ ಮೀರಿ ಫೋಟೊ ಶೂಟ್ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಹಂಪಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ.
ವಿಜಯನಗರ ಸ್ಮಾರಕ ಸಂಸ್ಕೃತಿ ಸಂರಕ್ಷಣ ಸೇನೆ ಅಧ್ಯಕ್ಷ ವಿಶ್ವನಾಥ ಮಾಳಗಿ ಅವರು ಸೋಮವಾರ ನೀಡಿದ ದೂರಿನ ಮೇರೆಗೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ‘ಹಂಪಿ: ನಿಯಮ ಮೀರಿ ಫೋಟೊ ಶೂಟ್’ ಶೀರ್ಷಿಕೆ ಅಡಿ ನ. 23ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.
‘ನಿಯಮಗಳನ್ನು ಉಲ್ಲಂಘಿಸಿ ಹಂಪಿಯ ವಿಜಯ ವಿಠಲ ದೇವಸ್ಥಾನ, ಕಮಲ ಮಹಲ್, ಮಹಾನವಮಿ ದಿಬ್ಬ ಸಮೀಪದ ಪುಷ್ಕರಣಿಯಲ್ಲಿ ವಿವಾಹಪೂರ್ವ ಫೋಟೊ ಶೂಟ್ ನಡೆಸಲಾಗಿದೆ. ವಿಜಯಿ ಶ್ಯಾಮ ಮತ್ತು ಕಂಪನಿ, ಜಾಹ್ನವಿ ರೆಡ್ಡಿ, ಸಿದ್ಧಾಂತ್, ಮಹಿಮ್, ಸುಮನ್ ಹಾಗೂ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಮಾಳಗಿ ದೂರಿನಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.