ADVERTISEMENT

ನ. 13ಕ್ಕೆ ಶೋಭಾಯಾತ್ರೆ, ತುಂಗಾ ಆರತಿ

ಕೋವಿಡ್‌ ಮಾರ್ಗಸೂಚಿ ಪ್ರಕಾರ ಹಂಪಿ ಉತ್ಸವ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 13:52 IST
Last Updated 10 ನವೆಂಬರ್ 2020, 13:52 IST
‘ಹಂಪಿ ಉತ್ಸವ’ದ ನಿಮಿತ್ತ ಹಂಪಿಯ ಕಡಲೆಕಾಳು ಗಣಪ ಸ್ಮಾರಕ ಎದುರಿನ ಮಂಟಪಕ್ಕೆ ಮಂಗಳವಾರ ಸಂಜೆ ವಿದ್ಯುತ್‌ ದೀಪಾಲಂಕಾರ ಮಾಡಲಾಯಿತು
‘ಹಂಪಿ ಉತ್ಸವ’ದ ನಿಮಿತ್ತ ಹಂಪಿಯ ಕಡಲೆಕಾಳು ಗಣಪ ಸ್ಮಾರಕ ಎದುರಿನ ಮಂಟಪಕ್ಕೆ ಮಂಗಳವಾರ ಸಂಜೆ ವಿದ್ಯುತ್‌ ದೀಪಾಲಂಕಾರ ಮಾಡಲಾಯಿತು   

ಹೊಸಪೇಟೆ: ವಿಜಯನಗರ ವೈಭವ ಸಾರುವ ‘ಹಂಪಿ ಉತ್ಸವ’ವನ್ನು ಈ ಸಲ ಜಿಲ್ಲಾಡಳಿತವು ಕೋವಿಡ್‌ ಮಾರ್ಗಸೂಚಿ ಪ್ರಕಾರ ಸರಳವಾಗಿ ಆಚರಿಸಲು ತೀರ್ಮಾನಿಸಿದ್ದು, ಕಾರ್ಯಕ್ರಮವು ಒಂದೇ ದಿನಕ್ಕೆ ಸೀಮಿತವಾಗಿರಲಿದೆ.

ನ. 13ರಂದು ಸಂಜೆ 4ಕ್ಕೆ ಹಂಪಿ ಉದ್ಧಾನ ವೀರಭದ್ರೇಶ್ವರ ದೇವಸ್ಥಾನದ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಉತ್ಸವಕ್ಕೆ ಚಾಲನೆ ನೀಡುವರು. ಜಿಲ್ಲೆಯ ಎಲ್ಲ ತಾಲ್ಲೂಕುಗಳ ಜಾನಪದ ಕಲಾತಂಡಗಳ ಪ್ರದರ್ಶನದೊಂದಿಗೆ ಶೋಭಾಯಾತ್ರೆ ಜರುಗಲಿದೆ.

ಮೆರವಣಿಗೆಯು ವಿರೂಪಾಕ್ಷೇಶ್ವರ ದೇವಸ್ಥಾನ ತಲುಪಿದ ನಂತರ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಸಂಜೆ 7ಕ್ಕೆ ತುಂಗಭದ್ರಾ ನದಿ ತಟದಲ್ಲಿ ತುಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಹಂಪಿ ವಿದ್ಯಾರಣ್ಯ ಭಾರತಿ ಸ್ವಾಮೀಜಿ, ಜಿಲ್ಲಾಧಿಕಾರಿ ಎಸ್‌.ಎಸ್‌. ನಕುಲ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸೈದುಲ್ಲಾ ಅಡಾವತ್‌ ಹಾಗೂ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.