ಹೊಸಪೇಟೆ: ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲು ಸೋಮವಾರ ತೆರೆಯಲಾಗಿದ್ದು, ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಮೊದಲ ದಿನ ಬೆರಳೆಣಿಕೆಯ ಭಕ್ತರು ಬಂದರು. ಭಕ್ತರು ಅಂತರ ಕಾಯ್ದುಕೊಂಡು ನಿಲ್ಲಲು ದೇಗುಲದ ಆವರಣದಲ್ಲಿ ಗುರುತು ಮಾಡಲಾಗಿದೆ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.
ಲಾಕ್ಡೌನ್ನಿಂದ ಇಷ್ಟು ದಿನ ಜನರಿಲ್ಲದೆ ಬಿಕೊ ಎನ್ನುತ್ತಿದ್ದ ರಥಬೀದಿಗೆ ಈಗ ಕಳೆ ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.