ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನ ವರೆಗೆ ಧಾರಾಕಾರ ಮಳೆಯಾಗಿದೆ.
ಹಗರಿಬೊಮ್ಮನಹಳ್ಳಿ, ಕುರುಗೋಡು, ಸಂಡೂರು, ಹೊಸಪೇಟೆ, ಹೂವಿನಹಡಗಲಿಯಲ್ಲಿ ಮಳೆಯಾಗಿದೆ.
ಸಂಡೂರು ತಾಲ್ಲೂಕಿನ ತೋರಣಗಲ್ಲು, ಕುರುಗೋಡಿನಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಮೇಲೆ ನೀರು ಆವರಿಸಿಕೊಂಡಿರುವ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.