ಹೊಸಪೇಟೆ: ಇಲ್ಲಿನ ಉಪ ನೋಂದಣಾಧಿಕಾರಿ ಪ್ರಭಾಕರ ಮಠದ್ ಅವರ ಮನೆ, ಕಚೇರಿ, ಫಾರ್ಮ್ ಹೌಸ್ ಸೇರಿದಂತೆ ನಾಲ್ಕು ಕಡೆಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ.
ನಗರದ ತಾಲ್ಲೂಕು ಕಚೇರಿಯಲ್ಲಿನ ಉಪನೋಂದಣಾಧಿಕಾರಿ ಕಚೇರಿ, ಬಸವೇಶ್ವರ ಬಡಾವಣೆಯಲ್ಲಿನ ಪ್ರಭಾಕರ ಅವರ ಮನೆ, ಕೂಡ್ಲಿಗಿಯಲ್ಲಿನ ಅವರ ಮಾವನ ಮನೆ ಹಾಗೂ ಕೂಡ್ಲಿಗಿಯ ವೀರಾಪುರದ ಫಾರ್ಮ್ ಹೌಸ್ ಮೇಲೆ ಎಸಿಬಿ ಎಸ್ಪಿ ಗುರುನಾಥ್ ಬಿ. ಮತ್ತೂರ್ ನೇತೃತ್ವದ ನಾಲ್ಕು ಪ್ರತ್ಯೇಕ ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ. ನಾಲ್ಕೂ ಕಡೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಹಾಗೂ ಆಸ್ತಿ ನೋಂದಣಿಯಲ್ಲಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.