ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಶನಿವಾರ 12 ಕ್ರಸ್ಟ್ ಗೇಟ್ಗಳನ್ನು ತೆಗೆದು ನದಿಗೆ ನೀರು ಹರಿಸಲಾಗುತ್ತಿದೆ.
12 ಕ್ರಸ್ಟ್ಗೇಟ್ಗಳನ್ನು ತಲಾ ಒಂದುವರೆ ಅಡಿ ಮೇಲಕ್ಕೆತ್ತಿ 36,000 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಕಾಲುವೆಗಳಿಗೆ 9,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.
ಅಣೆಕಟ್ಟೆಗೆ ಒಟ್ಟು 35,000 ಕ್ಯುಸೆಕ್ ನೀರು ಹರಿದು ಬರುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 1,632.94 ಅಡಿ ನೀರಿನ ಸಂಗ್ರಹವಿದೆ.
‘ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ತುಂಗಾ ಜಲಾಶಯದಿಂದ ನೀರು ಹರಿಸಲಾಗುತ್ತಿದ್ದು, ಒಳಹರಿವು ಹೆಚ್ಚಾಗಿದೆ. ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರಬೇಕು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.