ಹೊಸಪೇಟೆ: ಇಲ್ಲಿನ ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಾಗಿರುವುದರಿಂದ ಶನಿವಾರ 12 ಕ್ರಸ್ಟ್ ಗೇಟ್ಗಳನ್ನು ತೆಗೆದು ನದಿಗೆ ನೀರು ಹರಿಸಲಾಗುತ್ತಿದೆ.
12 ಕ್ರಸ್ಟ್ಗೇಟ್ಗಳನ್ನು ತಲಾ ಒಂದುವರೆ ಅಡಿ ಮೇಲಕ್ಕೆತ್ತಿ 36,000 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಕಾಲುವೆಗಳಿಗೆ 9,000 ಕ್ಯುಸೆಕ್ ನೀರು ಹರಿಸಲಾಗುತ್ತಿದೆ.
ಅಣೆಕಟ್ಟೆಗೆ ಒಟ್ಟು 35,000 ಕ್ಯುಸೆಕ್ ನೀರು ಹರಿದು ಬರುತ್ತಿದೆ. 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಅಣೆಕಟ್ಟೆಯಲ್ಲಿ ಸದ್ಯ 1,632.94 ಅಡಿ ನೀರಿನ ಸಂಗ್ರಹವಿದೆ.
‘ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ತುಂಗಾ ಜಲಾಶಯದಿಂದ ನೀರು ಹರಿಸಲಾಗುತ್ತಿದ್ದು, ಒಳಹರಿವು ಹೆಚ್ಚಾಗಿದೆ. ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರಬೇಕು’ ಎಂದು ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.