ADVERTISEMENT

ಹೊಸಪೇಟೆ: ಸಂಸದ ಬಿ.ವೈ. ರಾಘವೇಂದ್ರಗೆ ನಗರದಲ್ಲಿ ಸ್ವಾಗತ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2020, 7:45 IST
Last Updated 31 ಆಗಸ್ಟ್ 2020, 7:45 IST
ಸಂಸದ ಬಿ ವೈ ರಾಘವೇಂದ್ರ ಅವರನ್ನು ನಗರದಲ್ಲಿ ಸನ್ಮಾನಿಸಲಾಯಿತು
ಸಂಸದ ಬಿ ವೈ ರಾಘವೇಂದ್ರ ಅವರನ್ನು ನಗರದಲ್ಲಿ ಸನ್ಮಾನಿಸಲಾಯಿತು   
""

ಹೊಸಪೇಟೆ: ಸೋಮವಾರ ನಗರಕ್ಕೆ ಬಂದ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಬಿಜೆಪಿ ಮುಖಂಡರು, ಕಾರ್ಯಕರ್ತರು ಇಲ್ಲಿನ ಕನಕದಾಸ ವೃತ್ತದಲ್ಲಿ ಸ್ವಾಗತಿಸಿ ಬರಮಾಡಿಕೊಂಡರು.

ರಾಘವೇಂದ್ರ ಅವರು ಸಂಡೂರು ತಾಲ್ಲೂಕಿನ ಯಶವಂತನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರದ ಮೂಲಕ ತೆರಳುತ್ತಿದ್ದರು. ವಿಷಯ ತಿಳಿದು ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಕನಕದಾಸ ವೃತ್ತದಲ್ಲಿ ಸೇರಿ ಅವರನ್ನು ಬರಮಾಡಿಕೊಂಡರು.

ಸ್ಥಳೀಯರ ಸನ್ಮಾನ ಸ್ವೀಕರಿಸಿದ ರಾಘವೇಂದ್ರ ಅವರು ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಕೆಲಹೊತ್ತು ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿ ನಿರ್ಗಮಿಸಿದರು.

ADVERTISEMENT

ಬಿಜೆಪಿ ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಪ್ರಧಾನ ಕಾರ್ಯದರ್ಶಿಗಳಾದ ಶಂಕರ್‌ ಮೇಟಿ, ಬಿ. ಜೀವರತ್ನ, ಮುಖಂಡರಾದ ಸಾಲಿ ಸಿದ್ದಯ್ಯ ಸ್ವಾಮಿ, ಅಯ್ಯಾಳಿ ತಿಮ್ಮಪ್ಪ, ಸಂಗಪ್ಪ ಮೊದಲಾದವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.