ADVERTISEMENT

ಆಸ್ಪತ್ರೆ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 10:15 IST
Last Updated 11 ಡಿಸೆಂಬರ್ 2020, 10:15 IST
ಹೊರರೋಗಿ ವಿಭಾಗ ಸೇವೆ ಬಂದ್‌ ಇದ್ದ ಕಾರಣ ಶುಕ್ರವಾರ ಹೊಸಪೇಟೆಯ ಖಾಸಗಿ ಆಸ್ಪತ್ರೆ ಹೊರಗೆ ರೋಗಿಗಳು ಕಾದು ಕುಳಿತಿದ್ದರು
ಹೊರರೋಗಿ ವಿಭಾಗ ಸೇವೆ ಬಂದ್‌ ಇದ್ದ ಕಾರಣ ಶುಕ್ರವಾರ ಹೊಸಪೇಟೆಯ ಖಾಸಗಿ ಆಸ್ಪತ್ರೆ ಹೊರಗೆ ರೋಗಿಗಳು ಕಾದು ಕುಳಿತಿದ್ದರು   

ಹೊಸಪೇಟೆ: ಕೇಂದ್ರ ಸರ್ಕಾರವು ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ನೀಡಿರುವುದನ್ನು ವಿರೋಧಿಸಿ ಅಲೋಪಥಿ ವೈದ್ಯರು ಶುಕ್ರವಾರ ಕರೆ ನೀಡಿದ್ದ ಹೊರರೋಗಿ ವಿಭಾಗ (ಒಪಿಡಿ) ಸೇವೆ ಬಂದ್‌ಗೆ ನಗರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಎಂದಿನಂತೆ ಒಳ ಮತ್ತು ಹೊರರೋಗಿ ವಿಭಾಗಗಳಲ್ಲಿ ವೈದ್ಯರು, ರೋಗಿಗಳ ಆರೋಗ್ಯ ತಪಾಸಣೆ ಮಾಡಿದರು. ಮತ್ತೆ ಕೆಲವು ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ ಸಂಪೂರ್ಣ ಬಂದ್‌ ಇತ್ತು. ಇದರಿಂದಾಗಿ ರೋಗಿಗಳು, ಅದರಲ್ಲೂ ಗ್ರಾಮೀಣ ಪ್ರದೇಶದ ಜನ ತೊಂದರೆ ಅನುಭವಿಸಿದರು. ತುರ್ತು ಚಿಕಿತ್ಸೆ ಎಂದಿನಂತೆ ಇತ್ತು. ಬೆರಳೆಣಿಕೆಯಷ್ಟು ಮೆಡಿಕಲ್‌ಗಳಷ್ಟೇ ಬಂದ್‌ಗೆ ಬೆಂಬಲ ಸೂಚಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT