ADVERTISEMENT

ಹೋಟೆಲ್‌ ನೌಕರ ಸಾವು: ಕಾಲುವೆಯಲ್ಲಿ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2021, 12:59 IST
Last Updated 11 ಏಪ್ರಿಲ್ 2021, 12:59 IST

ಹೊಸಪೇಟೆ (ವಿಜಯನಗರ): ಇಲ್ಲಿನ ಹೋಟೆಲ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೂಡ್ಲಿಗಿ ತಾಲ್ಲೂಕಿನ ಬಡೇಲಡುಕು ಗ್ರಾಮದ ನಿವಾಸಿ ಬಸವರಾಜ (26) ಅವರ ಶವ ನಗರದ ಸ್ಟೇಷನ್‌ ರಸ್ತೆಯ ರಾಯ ಕಾಲುವೆಯಲ್ಲಿ ಭಾನುವಾರ ಪತ್ತೆಯಾಗಿದೆ.

‘ಪಾನಮತ್ತರಾಗಿ ಕಾಲುವೆಯಲ್ಲಿ ಬಿದ್ದು, ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಶಂಕೆ ಇದೆ. ತನಿಖೆ ನಂತರ ವಾಸ್ತವ ಗೊತ್ತಾಗಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT