ಹೊಸಪೇಟೆ (ವಿಜಯನಗರ): ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಿ.ಎಚ್.ವಘೇಲಾ ಮಂಗಳವಾರ ನಗರದ ಉಪಕಾರಾಗೃಹಕ್ಕೆ ಭೇಟಿ ನೀಡಿದರು.
ಕಾರಾಗೃಹದಲ್ಲಿ ಕೈಗೊಳ್ಳುತ್ತಿರುವ ಸ್ವಚ್ಛತೆ ಪರಿಶೀಲಿಸಿದ ನಂತರ ವಿಚಾರಣಾಧೀನ ಕೈದಿಗಳನ್ನು ಮಾತನಾಡಿಸಿ ಅವರಿಂದ ಮಾಹಿತಿ ಪಡೆದರು. ನಂತರ ಗ್ರಾಮೀಣ ಪೊಲೀಸ್ ಠಾಣೆಗೂ ಭೇಟಿ ನೀಡಿದರು.
ತಹಶೀಲ್ದಾರ್ ಎಚ್.ವಿಶ್ವನಾಥ್, ಉಪಕಾರಾಗೃಹದ ಜೈಲರ್ ಎಂ.ಎಸ್.ಕಲಾದಗಿ, ಪಟ್ಟಣ ಪೊಲೀಸ್ ಠಾಣೆಯ ಎಂ.ಶ್ರೀನಿವಾಸ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.