ಬಳ್ಳಾರಿ: ನಗರದ 5ನೇ ವಾರ್ಡಿನ ಕೊಂಡಾಪುರದಲ್ಲಿ ಬುಧವಾರ ರಾತ್ರಿ ಗುಡಿಸಲಿನಲ್ಲಿ ಕಾಣಿಸಿಕೊಂಡ ಬೆಂಕಿ ಅಕ್ಕಪಕ್ಕದ ಎರಡು ಗುಡಿಸಲಿಗೂ ಹಬ್ಬಿ ಮೂರೂ ಗುಡಿಸಲುಗಳು ಭಸ್ಮವಾದವು.
ಗುರುವಾರ ಬೆಳಿಗ್ಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಜಿ. ಸೋಮಶೇಖರ್ ರೆಡ್ಡಿ, ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಧಾನ್ಯ, ಆಹಾರದ ವ್ಯವಸ್ಥೆ ಮಾಡಿದರು. ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿಯಿಂದ ಮನೆ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.
ಉಪವಿಭಾಗಾಧಿಕಾರಿ ರಮೇಶ ಕೋನರೆಡ್ಡಿ, ತಹಸೀಲ್ದಾರ್ ರೆಹಮಾನ್ ಪಾಶಾ ಭೇಟಿ ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.